ಪೈಶಾಚಿಕ ಕೃತ್ಯ; ICU ವೆಂಟಿಲೇಟರ್ನಲ್ಲಿದ್ದ ಗಗನಸಖಿ ಮೇಲೆ ಲೈಂಗಿಕ ದೌರ್ಜನ್ಯ!

ಯಾವಾಗ ಓರ್ವ ಯುವತಿ ಮಧ್ಯ ರಾತ್ರಿ 12 ಗಂಟೆಗೆ ರಸ್ತೆ ಮೇಲೆ ಯಾವುದೇ ಭಯವಿಲ್ಲದೆ ಓಡಾಡುತ್ತಾಲೋ ಆಗಲೇ ದೇಶಕ್ಕೆ ಸ್ವಾತಂತ್ರ್ಯ ಬರೋದು ಎಂಬ ಮಾತೊಂದಿತ್ತು,. ಆದರೆ ಇಡೀ ದೇಶದಲ್ಲಿ ಈಗಲೂ ಹೆಣ್ಮಕ್ಕಳಿಗೆ ಯಾವುದೇ ಸುರಕ್ಷತೆ ಇಲ್ಲ. ದಿನಕ್ಕೊಂದು ರೇಪ್ ಕೇಸ್ಗಳು ದಾಖಲಾಗುತ್ತಿವೆ. ಇದೀಗ ವೆಂಟಿಲೇಟರ್ನಲ್ಲಿದ್ದ ಗಗನಸಖಿ ಮೇಲೆ ಆಸ್ಪತ್ರೆ ಸಿಬ್ಬಂದಿ ಲೈಂಗಿಕ ಸೌರ್ಜನ್ಯವೆಸಗಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ.
ರೋಗಿಯನ್ನು ಗುಣಪಡಿಸಬೇಕಾದವರೇ ಆಕೆಯ ಜತೆ ಅನುಚಿತವಾಗಿ ವರ್ತಿಸಿದ್ದು, ಇದೀಗ ಆಕ್ರೋಶವನ್ನು ಹುಟ್ಟುಹಾಕಿದೆ. ಗಗನಸಖಿ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ಮತ್ತು ವೆಂಟಿಲೇಟರ್ನಲ್ಲಿದ್ದಾಗ ಆಸ್ಪತ್ರೆ ಸಿಬ್ಬಂದಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ.
ವಿಮಾನಯಾನ ತರಬೇತಿಗಾಗಿ ಗುರುಗ್ರಾಮಕ್ಕೆ ಬಂದಿದ್ದ ಅವರು, ತಾನು ತಂಗಿದ್ದ ಹೋಟೆಲ್ನ ಈಜುಕೊಳದಲ್ಲಿ ಈಜಾಡಲು ಹೋಗಿ ಮುಳುಗಿ ಸಾಯುವ ಹಂತಕ್ಕೆ ತಲುಪಿದ್ದರು. ತುರ್ತು ಆರೈಕೆಗಾಗಿ ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ, ಏಪ್ರಿಲ್ 6 ರಂದು, ಆಕೆಯ ಆರೋಗ್ಯ ಹದಗೆಟ್ಟ ಕಾರಣ, ಆಕೆಯ ಪತಿ ಸದರ್ ಪ್ರದೇಶದ ಮತ್ತೊಂದು ಖಾಸಗಿ ಆಸ್ಪತ್ರೆಗೆ ವರ್ಗಾಯಿಸಿದರು, ಅಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.
ಏನಿದು ಪ್ರಕರಣ?
ಮಹಿಳೆ ದೂರು ನೀಡಿದ ಪ್ರಕಾರ, ಆಕೆ ಸಂಬಂಧಪಟ್ಟ ಕಂಪನಿಯ ಪರವಾಗಿ ತರಬೇತಿಗಾಗಿ ಗುರುಗ್ರಾಮ್ಗೆ ಬಂದಿದ್ದಳು, ಈ ವೇಳೆ ಖಾಸಗಿ ಹೋಟೆಲ್ನಲ್ಲಿ ತಂಗಿದ್ದಳು. ಈ ಸಂದರ್ಭದಲ್ಲಿ ಆಕೆ ನೀರಿನಲ್ಲಿ ಮುಳುಗಿ ಆರೋಗ್ಯ ತೀರಾ ಹದಗೆಟ್ಟಿತ್ತು.
ಬಳಿಕ ಆಕೆಯನ್ನ ಖಾಸಗಿ ಆಸ್ಪತ್ರೆಗೆ (Private Hospital) ದಾಖಲಿಸಲಾಗಿತ್ತು. ಇದೇ ತಿಂಗಳ ಏಪ್ರಿಲ್ 5 ರಂದು ಪತಿ ಆಕೆಯನ್ನ ಹೆಚ್ಚುವರಿ ಚಿಕಿತ್ಸೆಗಾಗಿ ಗುರುಗ್ರಾಮ್ನ ಬೇರೋಂದು ಆಸ್ಪತ್ರೆಗೆ ದಾಖಲಿಸಿದರು. ಆಕೆಯನ್ನು ಏಪ್ರಿಲ್ 13 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು.
ಆದ್ರೆ ಏಪ್ರಿಲ್ 6ರಂದು ಐಸಿಯುನಲ್ಲಿ ವೆಂಟಿಲೇಟರ್ನಲ್ಲಿದ್ದಾಗ ಆಸ್ಪತ್ರೆಯ ಕೆಲವು ಸಿಬ್ಬಂದಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ವೆಂಟಿಲೇಟರ್ನಲ್ಲಿದ್ದ ಕಾರಣ ನನಗೆ ಆಗ ಮಾತನಾಡಲೂ ಸಾಧ್ಯವಾಗಲಿಲ್ಲ, ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದೆ. ದೌರ್ಜನ್ಯ ನಡೆಯುವಾಗ ನನ್ನ ಅಕ್ಕಪಕ್ಕ ಇಬ್ಬರು ನರ್ಸ್ಗಳೂ ಇದ್ದರು ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.
ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಗುರುಗ್ರಾಮ್ನ ಸದರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ತಂಡವು ಆಸ್ಪತ್ರೆಗೆ ಧಾವಿಸಿ ಡ್ಯೂಟಿ ಚಾರ್ಟ್ ಹಾಗೂ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂಉದ ಗುರುಗ್ರಾಮ್ ಪೊಲೀಸ್ ಇನ್ಸ್ಪೆಕ್ಟರ್ ಸಂದೀಪ್ ಕುಮಾರ್ ತಿಳಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






