ಪ್ರಯಾಗರಾಜ್ ಕುಂಭಮೇಳದಲ್ಲಿ ಕಾಲ್ತುಳಿತ ಪ್ರಕರಣ: ಬೆಳಗಾವಿಯ ತಾಯಿ, ಮಗಳು ಸಾವು

ಜನವರಿ 29, 2025 - 16:00
 0  21
ಪ್ರಯಾಗರಾಜ್ ಕುಂಭಮೇಳದಲ್ಲಿ ಕಾಲ್ತುಳಿತ ಪ್ರಕರಣ: ಬೆಳಗಾವಿಯ ತಾಯಿ, ಮಗಳು ಸಾವು

ಉತ್ತರಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ 2025ರ ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿ 15 ಭಕ್ತರು ಜೀವ ಕಳೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಮಹಾಕುಂಭ ಮೇಳದಲ್ಲಿ ಮೌನಿ ಅಮಾವಾಸ್ಯೆ ಹಿನ್ನಲ್ಲೆ ಕೋಟ್ಯಾಂತರ ಭಕ್ತರು ಸೇರಿದ್ದಾರೆ. ಅಮೃತ ಸ್ನಾನ ಮಾಡಲು ಭಕ್ತರು ಸರದಿ ಸಾಲಿನಲ್ಲಿ ತೆರಳಿದ್ದಾರೆ.

ಆದರೆ ಭಕ್ತರ ಸಂಖ್ಯೆ ಹೆಚ್ಚಾದ ಕಾರಣ ತಡೆಗೋಡೆಗಳನ್ನು ದಾಟಿ ಅಮೃತಸ್ನಾನಕ್ಕೆ ತೆರಳಿದ್ದಾರೆ, ಇದು ನೂಕು ನುಗ್ಗಲಿಗೆ ಕಾರಣವಾಗಿದೆ. ಘಟನೆಯಿಂದ ಹಲವು ಭಕ್ತರು ಗಾಯಗೊಂಡಿದ್ದರೆ, 15ಕ್ಕೂ ಹೆಚ್ಚು ಭಕ್ತರು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. 

ಇನ್ನೂ ಪ್ರಯಾಗರಾಜ್​ನ ಕುಂಭಮೇಳದಲ್ಲಿ ಕಾಲ್ತುಳಿತದ ಪ್ರಕರಣದಲ್ಲಿ ಬೆಳಗಾವಿಯ ತಾಯಿ-ಮಗಳು ಸಾವಿಗೀಡಾಗಿದ್ದಾರೆ. ಮೃತರನ್ನು ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ್ (50) ಮೇಘಾ ಹತ್ತರವಾಠ್ ಎಂದು ಗುರುತಿಸಲಾಗಿದೆ. ಕುಂಬಮೇಳದಲ್ಲಿ ಕಾಲ್ತುಳಿದ ಬಳಿಕ ಇಬ್ಬರನ್ನೂ ಪ್ರಯಾಗ್‍ರಾಜ್‍ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರೂ ಸಾವಿಗೀಡಾಗಿದ್ದಾರೆ. ಮೂರು ದಿನಗಳ ಹಿಂದೆ ಸಾಯಿರಥ ಟ್ರಾವೆಲ್ ಏಜೆನ್ಸಿ ಮೂಲಕ 13 ಜನರ ತಂಡದಲ್ಲಿ ಅವರು ತೆರಳಿದ್ದರು ಎಂದು ತಿಳಿದು ಬಂದಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow