ಫೋಕ್ಸೋ ಕೇಸ್: ಜಾನಿ ಮಾಸ್ಟರ್ ಗೆ ನೀಡಿದ್ದ ರಾಷ್ಟ್ರಪ್ರಶಸ್ತಿ ರದ್ದು ಮಾಡಿದ ಕೇಂದ್ರ!

ಜಾನಿ ಮಾಸ್ಟರ್ ಪೋಕ್ಸೋ ಕೇಸ್ ಬೆನ್ನಲ್ಲೇ ಮತ್ತೊಂದು ಆಘಾತ ಎದುರಾಗಿದ್ದು, ಕೇಂದ್ರ ಸರ್ಕಾರವು ರಾಷ್ಟ್ರ ಪ್ರಶಸ್ತಿ ರದ್ದುಗೊಳಿಸಿದೆ.
ಇತ್ತೀಚೆಗೆ ಅವರ ಮೇಲೆ ತಮ್ಮ ಸಹಾಯಕ ನೃತ್ಯ ಸಂಯೋಜಕಿಗೆ ಕಿರುಕುಳ ನೀಡಿದ್ದಾರೆ ಎಂಬ ಆರೋಪಗಳು ಬಂದ ಹಿನ್ನೆಲೆಯಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಇತ್ತೀಚೆಗೆ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಅವರಿಗೆ ರಾಷ್ಟ್ರ ಪ್ರಶಸ್ತಿಯನ್ನು ರದ್ದುಗೊಳಿಸಲಾಗಿದೆ ಎಂದು ಘೋಷಿಸಿದೆ. ಇದರಿಂದಾಗಿ ಜಾನಿ ಮಾಸ್ಟರ್ಗೆ ಮತ್ತೊಂದು ದೊಡ್ಡ ಆಘಾತ ಎದುರಾಗಿದೆ.
2022ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿಗಳನ್ನು ಆಗಸ್ಟ್ ತಿಂಗಳಿನಲ್ಲಿ ಪ್ರಕಟಿಸಲಾಗಿದೆ ಎಂದು ತಿಳಿದುಬಂದಿದೆ. ತಿರುಚಿತ್ರಂಬಲಂ ಚಿತ್ರಕ್ಕಾಗಿ ಜಾನಿ ಮಾಸ್ಟರ್ ಮತ್ತು ಸತೀಶ್ ಮಾಸ್ಟರ್ ಅವರಿಗೆ ಉತ್ತಮ ನೃತ್ಯ ಸಂಯೋಜನೆ ವಿಭಾಗದಲ್ಲಿ ಜಂಟಿಯಾಗಿ ರಾಷ್ಟ್ರ ಪ್ರಶಸ್ತಿಯನ್ನು ಘೋಷಿಸಲಾಗಿತ್ತು. ಈ ಪ್ರಶಸ್ತಿ ಪ್ರದಾನ ಸಮಾರಂಭವು ಈ ತಿಂಗಳು 8 ರಂದು ದೆಹಲಿಯಲ್ಲಿ ನಡೆಯಲಿದೆ. ರಾಷ್ಟ್ರಪತಿಗಳಿಂದ ಈ ರಾಷ್ಟ್ರ ಪ್ರಶಸ್ತಿಯನ್ನು ವಿಜೇತರು ಪಡೆಯಲಿದ್ದಾರೆ.
ಇದಕ್ಕಾಗಿ ಎಲ್ಲಾ ರೀತಿಯ ಸಿದ್ಧತೆಗಳು ನಡೆಯುತ್ತಿವೆ. ಈ ನಡುವೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಜಾನಿ ಮಾಸ್ಟರ್ ಜೈಲಿನಲ್ಲಿದ್ದಾರೆ. ಪೋಕ್ಸೊ ಕಾಯ್ದೆಯಡಿ ಅವರ ಮೇಲೆ ಪ್ರಕರಣ ದಾಖಲಾಗಿದೆ. ಇದು ಬಹಳ ಗಂಭೀರವಾದ ಪ್ರಕರಣ ಎಂದು ಸರ್ಕಾರ ಮತ್ತು ನ್ಯಾಯಾಲಯ ಪರಿಗಣಿಸಿದೆ. ಈ ಪ್ರಕರಣದ ವಿಚಾರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಂತಹ ಪರಿಸ್ಥಿತಿಯಲ್ಲಿ ಅವರಿಗೆ ರಾಷ್ಟ್ರ ಪ್ರಶಸ್ತಿ ನೀಡುವುದು ಸರಿಯಲ್ಲ ಎಂದು ಸರ್ಕಾರ ಭಾವಿಸಿದೆ. ಆದ್ದರಿಂದ ರಾಷ್ಟ್ರ ಪ್ರಶಸ್ತಿಯನ್ನು ರದ್ದುಗೊಳಿಸಲಾಗಿದೆ ಎಂದು ಘೋಷಿಸಿದೆ.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






