ಬಸ್ ಹತ್ತುವ ಮುನ್ನ ಹುಷಾರ್: ಚಿನ್ನ ಕದ್ದ ಚೋರಿಯರು ಸಿಕ್ಕಿಬಿದ್ದದ್ದು ಹೇಗೆ? 6.38 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಸೀಜ್!

ಇತ್ತೀಚಿಗೆ ಕಳ್ಳರು, ದರೋಡೆಕೋರರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗಿದೆ. ಪೊಲೀಸರಿಗೂ ಚಳ್ಳೆಹಣ್ಣು ತಿನ್ನಿಸುವ ಖತರ್ನಾಕ್ ಕಳ್ಳರು ಹಾಡಹಗಲೇ ಕೋಟಿ ಕೋಟಿ ಲೂಟಿ ಮಾಡಿ ಪರಾರಿಯಾಗ್ತಿದ್ದಾರೆ. ಅದರ ಜೊತೆಗೆ ಸಾರಿಗೆ ಬಸ್ ಗಳಲ್ಲಿ ಕಳ್ಳತನ ಹೆಚ್ಚಾಗುತ್ತಿದೆ. ಹೌದು ಹೊಳೆನರಸೀಪುರ ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ಖತರ್ನಾಕ್ ಕಳ್ಳಿಯರನ್ನು ಬಂಧಿಸಿ 6.38 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ಆಂಧ್ರದ ಚಿತ್ತೂರು ಜಿಲ್ಲೆ ಕುಪ್ಪಂನ ಗ್ರಾಮದ ಶಶಿ(35), ಮಾಧವಿ(40), ಅಕಿಲ(30), ವಿದ್ಯಾ(29) ಬಂಧಿತ ಕಳ್ಳಿಯರು. ಇನ್ನು ಆರೋಪಿಗಳ ಬಳಿ ಇದ್ದ 6.38 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಿದ್ದಾರೆ. ಹೊಳೆನರಸೀಪುರ ಠಾಣೆ ಪೊಲೀಸರು ನಡೆಸಿದ ಕಾರ್ಯಚರಣೆ ವೇಲೆ ಈ ಗ್ಯಾಂಗ್ ಸಿಕ್ಕಿಬಿದ್ದಿದೆ.
ಹಾಸನ ಜಿಲ್ಲೆ ಹೊಳೆನರಸೀಪುರ ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಳಿ ಮಹಿಳೆಯೊಬ್ಬರ ಸರ ಕಳ್ಳತನವಾಗಿದೆ. ಈ ಬಗ್ಗೆ ಕೇಸ್ ದಾಖಲಿಸಿಕೊಂಡ ಹೊಳೆನರಸೀಪುರ ನಗರ ಠಾಣೆ ಪೋಲೀಸರು ತನಿಖೆಗಿಳಿದಾಗ ಭಯಾನಕ ಸತ್ಯ ಬಯಲಾಗಿದೆ.
ಪ್ರಯಾಣಿಕರ ಸೋಗಿನಲ್ಲಿ ಬಸ್ ಹತ್ತಲು ಬರೋದು, ಗಡಿಬಿಡಿಯಲ್ಲಿ ಬಸ್ ಹತ್ತೋ ವೇಳೆ ಜನರ ಗಮನ ಬಸ್ ಹತ್ತೋಕಡೆ ಇದ್ದಾಗ ಚಿನ್ನದ ಸರ, ಮಾಂಗಲ್ಯ ಸರ, ನೆಕ್ಲೇಸ್ ಎಗರಿಸಿ ಎಸ್ಕೇಪ್ ಆಗೋದು ಇವರ ಕಾಯಕ. ಚಿನ್ನಾಭರಣ ಕಳ್ಳತನವನ್ಮೇ ಫ್ಯಾಶನ್ ಆಗಿಸಿಕೊಂಡ ಆಂಧ್ರಪ್ರದೇಶ ಮೂಲದ ಕುಪ್ಪಂನ ನಾಲ್ವರು ಕತರ್ನಾಕ್ ಲೇಡೀಸ್ ಅಂದರ್ ಆಗಿದ್ದಾರೆ.
ಕಳ್ಳಿಯರಿಗಾಗಿ ಬಲೆ ಬೀಸಿದ ಇನ್ಸ್ಪೆಕ್ಟರ್ ಪ್ರದೀಪ್ ಪಿಎಸ್ ಐ ಅಭಿಜಿತ್ ನೇತೃತ್ವದ ಟೀಂ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರಿಂದ 6.38 ಲಕ್ಷ ರೂ ಮೌಲ್ಯದ ಚಿನ್ನಾಭರಣಗಳಲ್ಲಿ 35 ಗ್ರಾಂ ತೂಕದ ಚಿನ್ನದ ಸರ, 22 ಗ್ರಾಂ ತೂಕದ ನೆಕ್ಲೆಸ್, 5 ಗ್ರಾಂ ತೂಕದ ಬೆಳ್ಳಿ ಗಣಪತಿ ಡಾಲರ್ ಹಾಗೂ 29 ಗ್ರಾಂ ತೂಕದ ಚಿನ್ನದ ಸರ ವಶಕ್ಕೆ ಪಡೆಯಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






