ಬಾಣಂತಿಯರ ಸಾವಿನ ದುರಂತ: ಐವರು ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ!

ಡಿಸೆಂಬರ್ 8, 2024 - 15:57
 0  13
ಬಾಣಂತಿಯರ ಸಾವಿನ ದುರಂತ: ಐವರು ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ!

ಬಾಣಂತಿಯರ ಸಾವಿನ ದುರಂತಕ್ಕೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸದ್ಯ ಬಳ್ಳಾರಿ ಜಿಲ್ಲಾಸ್ಪತ್ರೆ (ಬಿಮ್ಸ್)ಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಕ್ಕೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್​ ಅಹ್ಮದ್​ ಅವರು 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಮೃತ ಬಾಣಂತಿಯರ ಸಾವು ಒಂದು ಕಡೆಯಾದ್ರೆ 2 ಲಕ್ಷ ರೂಪಾಯಿ ಪರಿಹಾರ ನೊಂದ ಕುಟುಂಬಕ್ಕೆ ಬಹಳ ಕಡಿಮೆ ಆಗಿತ್ತು.

ಇದೀಗ 3 ಲಕ್ಷ ರೂ. ಕೊಡುತ್ತೇವೆ ಎಂದು ತಿಳಿಸಿದರು. ಬಳ್ಳಾರಿ ಬಿಮ್ಸ್​ನಲ್ಲಿ ಐವರು ಬಾಣಂತಿಯರು ಮೃತಪಟ್ಟಿದ್ದಾರೆ, ಇದು ದುರದೃಷ್ಟ. ಮೃತ ಬಾಣಂತಿಯರೆಲ್ಲರೂ ಬಡ ಕುಟುಂಬದವರು. ಹೀಗಾಗಿ, ಮೃತ ಬಾಣಂತಿಯರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡುತ್ತೇವೆ ಎಂದು ಹೇಳಿದರು. ಬಳ್ಳಾರಿಯ ಬಾಣಂತಿಯರ ಸರಣಿ ಸಾವಿಗೆ ಕೆಎಸ್​​ಎಂಎಸ್​​ಸಿಎಲ್ ನೀಡಿದ ಔಷಧಿ ಕಾರಣನಾ ಎಂಬ ಅನುಮಾನ ವ್ಯಕ್ತಪಡಿಸಲಾಗಿದೆ.    

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow