ಬಿಕ್ಲು ಶಿವ ಕೊಲೆ ಪ್ರಕರಣ: ಮತ್ತೆ ಮೂವರು ಆರೋಪಿಗಳು ಬಂಧನ

ಜುಲೈ 21, 2025 - 10:49
 0  9
ಬಿಕ್ಲು ಶಿವ ಕೊಲೆ ಪ್ರಕರಣ: ಮತ್ತೆ ಮೂವರು ಆರೋಪಿಗಳು ಬಂಧನ

ಬೆಂಗಳೂರು: ಬೆಂಗಳೂರು ನಗರದಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತಿನಗರ ಪೊಲೀಸರು  ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ಅನಿಲ್, ಅರುಣ್ ಮತ್ತು ನವೀನ್ ಎಂದು ಗುರುತಿಸಲಾಗಿದೆ. ಇವರಲ್ಲಿ ಅರುಣ್ ಹಾಗೂ ನವೀನ್ಪ್ರಕರಣದ 1 ಆರೋಪಿ ಜಗದೀಶನ ಆಪ್ತ ಸಹಚರರಾಗಿದ್ದಾರೆ.

ಜುಲೈ 15 ರಾತ್ರಿ, ಹಲಸೂರು ನಿವಾಸದ ಎದುರು ಕಾರಿನಲ್ಲಿ ಬಂದ ದುಷ್ಕರ್ಮಿಗಳು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿದ್ದ ಬಿಕ್ಲು ಶಿವ (ಶಿವಪ್ರಕಾಶ್) ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದರು. ಸಂಬಂಧ ಪೊಲೀಸರು ಈಗಾಗಲೇ ಐವರು ಆರೋಪಿಗಳನ್ನು ಬಂಧಿಸಿದ್ದರುಕಿರಣ್, ವಿಮಲ್, ಪ್ರದೀಪ್, ಮದನ್ ಮತ್ತು ಸ್ಯಾಮ್ಯುವೆಲ್.

ಇದೀಗ, ತನಿಖೆ ಮುಂದುವರೆಸಿದ ಪೊಲೀಸರು ಇನ್ನೂ ಮೂವರನ್ನು ಬಂಧಿಸಿದ್ದು, ಇವರಲ್ಲಿ ಇಬ್ಬರು ಪ್ರಮುಖ ಆರೋಪಿ ಜಗದೀಶನ ಸಹಚರರು ಎನ್ನಲಾಗಿದೆ. ಪೊಲೀಸರು ಇನ್ನುಳಿದ ಆರೋಪಿಗಳ ಪತ್ತೆಗಾಗಿ ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow