ಬಿಜೆಪಿಯವರ ಅಜೆಂಡಾ ಸಿದ್ದರಾಮಯ್ಯ ಅವರನ್ನು ಮುಗಿಸುವುದು: ದಿನೇಶ್ ಗುಂಡೂರಾವ್

ಬೆಂಗಳೂರು: ಬಿಜೆಪಿಯವರ ಅಜೆಂಡಾ ಸಿದ್ದರಾಮಯ್ಯ ಅವರನ್ನು ಮುಗಿಸುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ತುರ್ತುಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿ ಇವತ್ತು ದೇಶದಲ್ಲಿದೆ. ಇಡಿ, ಐಟಿ ಬಳಸಿಕೊಂಡು ಅವರ ವಿರೋಧಿಗಳನ್ನು ಮುಗಿಸುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯವರ ಅಜೆಂಡಾ ಸಿದ್ದರಾಮಯ್ಯ ಅವರನ್ನು ಮುಗಿಸುವುದು ಎಂದು ಆರೋಪಿಸಿದರು.
ಇನ್ನೂ ಬಿಜೆಪಿ ಅವರು ಎಲ್ಲದರಲ್ಲಿಯೂ ಸಿಎಂ ಹೆಸರನ್ನು ಹಾಳು ಮಾಡಬೇಕು ಎಂದು ನೋಡುತ್ತಿದ್ದಾರೆ. ಅದಕ್ಕಾಗಿಯೇ ಸಿಎಂ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ. ಕೇಂದ್ರದ ಏಜೆನ್ಸಿಗಳನ್ನು ಬಿಟ್ಟು ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಮಾಧ್ಯಮದವರು, ರಾಜಕಾರಣಿಗಳು, ಎನ್ಜಿಓ ಯಾರನ್ನು ಬಿಜೆಪಿಯವರು ಬಿಟ್ಟಿಲ್ಲ. ಅಧಿಕಾರ ಬಳಸಿ ಹೆದರಿಕೆ, ಬೆದರಿಕೆ ಹಾಕುತ್ತಿದ್ದಾರೆ. ಇದು ಮೋದಿ ಸರ್ಕಾರ ದೇಶದ ಪರಿಸ್ಥಿತಿ ಎಂದು ಕಿಡಿಕಾರಿದರು.
ನಿಮ್ಮ ಪ್ರತಿಕ್ರಿಯೆ ಏನು?






