ಬಿಟ್ಟು ಬಿಡದೆ ಕಾಡಿದ ಅನಾರೋಗ್ಯ: ಜಿಗುಪ್ಸೆಗೊಂಡ ವ್ಯಕ್ತಿ ನೇಣಿಗೆ ಶರಣು!

ಬೆಂಗಳೂರು:- ಬೆಂಗಳೂರಿನ ಗೊಲ್ಲರಹಟ್ಟಿಯಲ್ಲಿ ವ್ಯಕ್ತಿಯೋರ್ವ ಅನಾರೋಗ್ಯಕ್ಕೆ ಬೇಸತ್ತು ನೇಣಿಗೆ ಶರಣಾಗಿರುವ ಘಟನೆ ಜರುಗಿದೆ. ಪುರುಷೋತ್ತಮ ಮೃತ ವ್ಯಕ್ತಿ.
ಮೃತ ವ್ಯಕ್ತಿಯು, ಮಾಗಡಿ ತಾಲೂಕು ರಾಮನಗರ ಜಿಲ್ಲೆ ಬಾಳೆನಹಳ್ಳಿಯ ಪುರುಷೋತ್ತಮ್ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಪುರುಷೋತ್ತಮ್ ಕಳೆದ 5 ವರ್ಷದಿಂದ ಹೆಂಡತಿ ಹಾಗೂ ಮಗುವಿನೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದರು.
ಅನಾರೋಗ್ಯದಿಂದ ಬೆಸತ್ತು ಗೊಲ್ಲರಹಟ್ಟಿಯಲ್ಲಿ ರೂಂ ಡೋರ್ ಲಾಕ್ ಮಾಡಿಕೊಂಡು ನೇಣಿಗೆ ಶರಣಾಗಿದ್ದಾರೆ. ಘಟನೆ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರಿಂದ ತನಿಖೆ ಮುಂದುವರಿದಿದೆ.
ನಿಮ್ಮ ಪ್ರತಿಕ್ರಿಯೆ ಏನು?






