ಭೀಕರ ರಸ್ತೆ ಅಪಘಾತ: ಕುಂಭಮೇಳಕ್ಕೆ ತೆರಳುತ್ತಿದ್ದ ಕರ್ನಾಟಕದ ಇಬ್ಬರು ಸಾವು!

ವಿಜಯಪುರ: 144 ವರ್ಷಗಳಿಗೊಮ್ಮೆ ಬರುವ ಈ ಮಹಾಕುಂಭ ಮುಗಿಯಲು ಇನ್ನೊಂದೇ ದಿನ ಬಾಕಿ ಇದೆ. ಈಗಾಗಲೇ ಜಗತ್ತಿನ ಮೂಲೆ ಮೂಲೆಯಿಂದ ಕೋಟಿ ಕೋಟಿ ಭಕ್ತರು ಮಹಾಕುಂಭಮೇಳದಲ್ಲಿ ಭಾಗಿಯಾಗಿ ಜೀವನ ಪಾವನ ಎನಿಸಿಕೊಂಡಿದ್ದಾರೆ. ಈ ಹೊತ್ತಲ್ಲೇ ಪ್ರಯಾಗರಾಜ್ ಕುಂಭಮೇಳಕ್ಕೆ ತೆರಳಿದ್ದ ವಿಜಯಪುರ ಜಿಲ್ಲೆಯ ಇಬ್ಬರು ಯಾತ್ರಿಗಳು ಗುಜರಾತ್ನ ಪೋರ್ಬಂದರ್ ಬಳಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಚಡಚಣದ ವಿಶ್ವನಾಥ ಅವಜಿ ಮತ್ತು ಮಲ್ಲಿಕಾರ್ಜುನ ಸದ್ದಲಗಿ ಮೃತರು. ವಾಹನದಲ್ಲಿ ಒಟ್ಟು 17 ಜನ ಪ್ರಯಾಗ್ರಾಜ್ಗೆ ತೆರಳುತ್ತಿದ್ದರು. ಯಾತ್ರಾರ್ಥಿಗಳಿದ್ದ ವಾಹನ ಮಾರ್ಗ ಮಧ್ಯೆ ನಿಂತಿದ್ದ ಟಿಪ್ಪರ್ಗೆ ಡಿಕ್ಕಿಯಾಗಿದೆ. ವಾಹನದಲ್ಲಿದ್ದ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಪೋರಬಂದರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






