ಭೀಕರ ರಸ್ತೆ ಅಪಘಾತ: ಕುಂಭಮೇಳಕ್ಕೆ ತೆರಳುತ್ತಿದ್ದ ಕರ್ನಾಟಕದ ಇಬ್ಬರು ಸಾವು!

ಫೆಬ್ರವರಿ 25, 2025 - 14:23
ಫೆಬ್ರವರಿ 25, 2025 - 14:23
 0  12
ಭೀಕರ ರಸ್ತೆ ಅಪಘಾತ: ಕುಂಭಮೇಳಕ್ಕೆ ತೆರಳುತ್ತಿದ್ದ ಕರ್ನಾಟಕದ ಇಬ್ಬರು  ಸಾವು!

ವಿಜಯಪುರ: 144 ವರ್ಷಗಳಿಗೊಮ್ಮೆ ಬರುವ ಈ ಮಹಾಕುಂಭ ಮುಗಿಯಲು ಇನ್ನೊಂದೇ ದಿನ ಬಾಕಿ ಇದೆ. ಈಗಾಗಲೇ ಜಗತ್ತಿನ ಮೂಲೆ ಮೂಲೆಯಿಂದ ಕೋಟಿ ಕೋಟಿ ಭಕ್ತರು ಮಹಾಕುಂಭಮೇಳದಲ್ಲಿ ಭಾಗಿಯಾಗಿ ಜೀವನ ಪಾವನ ಎನಿಸಿಕೊಂಡಿದ್ದಾರೆ. ಈ ಹೊತ್ತಲ್ಲೇ ಪ್ರಯಾಗರಾಜ್ ಕುಂಭಮೇಳಕ್ಕೆ ತೆರಳಿದ್ದ ವಿಜಯಪುರ ಜಿಲ್ಲೆಯ ಇಬ್ಬರು ಯಾತ್ರಿಗಳು ಗುಜರಾತ್‌ನ ಪೋರ್‌ಬಂದರ್ ಬಳಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಚಡಚಣದ ವಿಶ್ವನಾಥ ಅವಜಿ ಮತ್ತು ಮಲ್ಲಿಕಾರ್ಜುನ ಸದ್ದಲಗಿ ಮೃತರು. ವಾಹನದಲ್ಲಿ ಒಟ್ಟು 17 ಜನ ಪ್ರಯಾಗ್​ರಾಜ್​ಗೆ ತೆರಳುತ್ತಿದ್ದರು. ಯಾತ್ರಾರ್ಥಿಗಳಿದ್ದ ವಾಹನ ಮಾರ್ಗ ಮಧ್ಯೆ ನಿಂತಿದ್ದ ಟಿಪ್ಪರ್​​ಗೆ ಡಿಕ್ಕಿಯಾಗಿದೆ. ವಾಹನದಲ್ಲಿದ್ದ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಪೋರಬಂದರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow