ಬೀದರ್ ಬೆನ್ನಲ್ಲೇ ಮಂಗಳೂರಿನಲ್ಲೂ ಬ್ಯಾಂಕ್ ದರೋಡೆ! 12 ಕೋಟಿ ಮೌಲ್ಯದ ಚಿನ್ನ, ನಗದು ಹೊತ್ತು ಪರಾರಿ

ಜನವರಿ 17, 2025 - 15:59
 0  9
ಬೀದರ್ ಬೆನ್ನಲ್ಲೇ ಮಂಗಳೂರಿನಲ್ಲೂ ಬ್ಯಾಂಕ್ ದರೋಡೆ! 12 ಕೋಟಿ ಮೌಲ್ಯದ ಚಿನ್ನ, ನಗದು ಹೊತ್ತು ಪರಾರಿ

ಮಂಗಳೂರು: ಎಟಿಎಂಗೆ ಹಣ ತುಂಬಲು ಬಂದ ಬ್ಯಾಂಕ್ ಸಿಬ್ಬಂದಿ ಮೇಲೆ ಇಬ್ಬರು ಬಂದೂಕುಧಾರಿಗಳು ಫೈರಿಂಗ್ ಮಾಡಿ ಲಕ್ಷ, ಲಕ್ಷ ಹಣದ ಬಾಕ್ಸ್​ ಜೊತೆ ಎಸ್ಕೇಪ್ ಆಗಿದ್ದಾರೆ. ಹಾಡಹಗಲೇ ನಡೆದಿರುವ ದರೋಡೆ ಬೀದರ್​ ನಗರವನ್ನು ತಲ್ಲಣಿಸುವಂತೆ ಮಾಡಿತ್ತು. ಇದೀಗ ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕಿನ ಕೋಟೆಕಾರು ಬ್ಯಾಂಕ್‌ನಲ್ಲಿ ಕಾರಿನಲ್ಲಿಬಂದ ಆಗಂತುಕರು ಚಿನ್ನ, ಒಡವೆ, ಹಣವನ್ನೆಲ್ಲಾ ಕದ್ದು ಪರಾರಿಯಾಗಿದ್ದಾರೆ.

ಹಾಡಹಗಲೇ ಬ್ಯಾಂಕ್ಗೆ ನುಗಿದ ಐವರು ದರೋಡೆಕೋರರು ಕೃತ್ಯ ಎಸಗಿದ್ದಾರೆ. ಬಂದೂಕಿನಿಂದ ಬ್ಯಾಂಕ್​​ ಸಿಬ್ಬಂದಿಯನ್ನು ಬೆದರಿಸಿ ಚಿನ್ನಾಭರಣ, ನಗದು ಕಳ್ಳತನ ಮಾಡಿದ್ದಾರೆ. ಹಣ, ಚಿನ್ನಾಭರಣದೊಂದಿಗೆ ಕಾರಿನಲ್ಲಿ ಪರಾರಿಯಾಗಿದ್ದಾರೆ.

ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದ ಕಾರಣ ಹೆಚ್ಚಿನ ಪೊಲೀಸರು ಅದರ ಭದ್ರತೆಗೆ ತೆರಳಿದ್ದರು. ಇದನ್ನೇ ಟಾರ್ಗೆಟ್ ಮಾಡಿಕೊಂಡು ದರೋಡೆಗೆ ಸಂಚು ರೂಪಿಸಿದ್ದ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ಠಾಣೆ ಪೊಲೀಸರು, ಶ್ವಾನದಳ ಸಿಬ್ಬಂದಿ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಬ್ಯಾಂಕ್ಗೆ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow