ಬೂತ್ʼಗಳಲ್ಲಿ ಬೆರಳೆಣಿಕೆಯಷ್ಟು ಮುಸ್ಲಿಂ ಮತಗಳು ಜೆಡಿಎಸ್ʼಗೆ ಬಂದಿದೆ: ಆರ್. ಅಶೋಕ್

ಬೆಂಗಳೂರು: ಬೂತ್ʼಗಳಲ್ಲಿ ಬೆರಳೆಣಿಕೆಯಷ್ಟು ಮುಸ್ಲಿಂ ಮತಗಳು ಜೆಡಿಎಸ್ʼಗೆ ಬಂದಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಮುಸ್ಲಿಂ ವೋಟುಗಳು ಬರದೇ ಸೋಲಾಯ್ತು ಎಂಬ ನಿಖಿಲ್ ಹೇಳಿಕೆ ವಿಚಾರವಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಖಿಲ್ ಸತ್ಯವನ್ನೇ ಹೇಳಿದ್ದಾರೆ. ಬೂತ್ಗಳಲ್ಲಿ ಬೆರಳೆಣಿಕೆಯಷ್ಟು ಮುಸ್ಲಿಂ ಮತಗಳು ಜೆಡಿಎಸ್ಗೆ ಬಂದಿದೆ.
ಆ ಸಮುದಾಯ ನಿಖಿಲ್ನನ್ನು ಸೋಲಿಸಲು ಮತ ಹಾಕಿಲ್ಲ. ಉಳಿದ ಸಮುದಾಯಗಳೂ ಒಟ್ಟಾಗಿ ಮತ ಚಲಾಯಿಸಿಲ್ಲ. ಮಹಾರಾಷ್ಟ್ರದಲ್ಲಿ ಆದಂತೆ ಒಟ್ಟಾಗಿ ಆಗಲಿಲ್ಲ. ಇಲ್ಲಿ ಮುಸ್ಲಿಂ ಸಮುದಾಯ ಒಟ್ಟಾಗಿ ಉಳಿದ ಸಮುದಾಯ ಒಟ್ಟಾಗಲಿಲ್ಲ. ಮುಸ್ಲಿಂ ಸಮುದಾಯದ ಥರ ಉಳಿದ ಸಮುದಾಯಗಳೂ ನಿಖಿಲ್ ಪರ ಒಟ್ಟಾಗಿ ನಿಲ್ಲಬೇಕಿತ್ತು ಎಂದು ಹೇಳಿದರು.
ಇನ್ನೂ ಚುನಾವಣಾ ಫಲಿತಾಂಶ ವಿಚಾರವಾಗಿ ಮಾತನಾಡಿ, ಫಲಿತಾಂಶದಿಂದ ನಮ್ಮ ಮೇಲೆ, ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರಲ್ಲ. ಹಿಂದೆ ನಮ್ಮ ಸರ್ಕಾರ ಇದ್ದಾಗ 18 ಉಪಚುನಾವಣೆ ಗೆದ್ದಿದ್ದೇವು. ನಂತರ ಸಾರ್ವತ್ರಿಕ ಚುನಾವಣೆ ಸೋತಿದ್ದೇವು. ಈ ಫಲಿತಾಂಶ ಕಾಂಗ್ರೆಸ್ ಅಕ್ರಮಗಳಿಗೆ ಕ್ಲೀನ್ಚಿಟ್ ಅಲ್ಲ. ಅದೇ ಬೇರೆ ಇದೇ ಬೇರೆ, ಉಪಚುನಾವಣೆ ಸ್ಥಳೀಯ ವಿಚಾರಗಳ ಮೇಲೆ ನಡೆದಿದೆ. ಇದು ರಾಜ್ಯದ ತೀರ್ಪಲ್ಲ. ಸರ್ಕಾರದ ವಿರುದ್ಧ ನಮ್ಮ ಹೋರಾಟ ನಿಲ್ಲಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಿಮ್ಮ ಪ್ರತಿಕ್ರಿಯೆ ಏನು?






