ಬೆಂಗಳೂರಿನ ಪ್ರತಿಷ್ಟಿತ ಅಪಾರ್ಟ್ಮೆಂಟ್ ನಲ್ಲಿ ಕೊಲೆ: ಚಾಕುವಿನಿಂದ ಪ್ರೇಯಸಿ ಕೊಂದ ಪ್ರಿಯತಮ!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರತಿಷ್ಟಿತ ಅಪಾರ್ಟ್ಮೆಂಟ್ ನಲ್ಲಿ ಭೀಕರ ಕೊಲೆ ನಡೆದಿದೆ. ಇಂದಿರಾ ನಗರದ ಸರ್ವಿಸ್ ಅಪಾರ್ಟ್ ಮೆಂಟ್ನಲ್ಲಿ ಪ್ರಿಯಕನೋರ್ವ ತನ್ನ ಪ್ರೇಯಸಿಯನ್ನೇ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜರುಗಿದೆ.
ಅಸ್ಸಾಂ ಮೂಲದ ಮಾಯಾ ಕೊಲೆಯಾದ ಯುವತಿ. ಮಾಯಾಳನ್ನು ಕೊಂದು ಆರವ್ ಹಾರ್ನಿ ಎನ್ನುವಾತ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಇಂದಿರಾನಗರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಾಗಿ ಬಲೆ ಬೀಸಿದ್ದಾರೆ.
ಈಕೆ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡು ಹೆಚ್ಎಸ್ಆರ್ ಲೇಔಟ್ನಲ್ಲಿ ವಾಸವಿದ್ದ ಮಾಯಾ ಗೊಗೋಯಿ, ನವೆಂಬರ್ 23ರಂದು ಮಾಯಾ ಹಾಗೂ ಆಕೆಯ ಪ್ರಿಯಕರ ಆರವ್ ಹಾರ್ನಿ ಇಂದಿರಾನಗರದ ಸರ್ವಿಸ್ ಅಪಾರ್ಟ್ ಮೆಂಟ್ ನಲ್ಲಿ ರೂಮ್ ಬುಕ್ ಮಾಡಿಕೊಂಡು ತಂಗಿದ್ದರು. ಆದ್ರೆ, ಅದೇನಾಯ್ತೋ ಏನೋ ನಿನ್ನೆ ಸಂಜೆ ಪ್ರಿಯಕರ ಆರವ್ ಹಾರ್ನಿ, ತನ್ನ ಪ್ರೇಯಸಿ ಮಾಯಾಳನ್ನು ಕೊಂದು ಪರಾರಿಯಾಗಿದ್ದಾನೆ.ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






