ಬೆಂಗಳೂರಿನಲ್ಲಿ ತಡರಾತ್ರಿ ಹರಿದ ನೆತ್ತರು: ಕಾಂಗ್ರೆಸ್ ಶಾಸಕನ ಬರ್ಬರ ಕೊಲೆ!

ಬೆಂಗಳೂರು:- ಶನಿವಾರ ತಡರಾತ್ರಿ ಕಾಂಗ್ರೆಸ್ ಶಾಸಕನ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಅಶೋಕನಗರದ ಗರುಡ ಮಾಲ್ ಬಳಿ ಜರುಗಿದೆ.
ಶೇಖ್ ಹೈದರ್ ಅಲಿ ಕೊಲೆಯಾದ ಕೈ ಮುಖಂಡ. ಹೈದರ್ ಅಲಿ ಲೈವ್ ಬ್ಯಾಂಡ್ನಿಂದ ರಾತ್ರಿ ಸ್ನೇಹಿತನ ಜೊತೆಗೆ ಬೈಕ್ನಲ್ಲಿ ಬರುತ್ತಿದ್ದ ವೇಳೆ ಆರೋಪಿಗಳು ಬೈಕ್ನಲ್ಲಿ ಹಿಂಬಾಲಿಸಿಕೊಂಡು ಬಂದು ಅಡ್ಡಗಟ್ಟಿಕೊಲೆ ಮಾಡಿದ್ದಾರೆ. ಘಟನೆಯಲ್ಲಿ ಜೊತೆಯಲ್ಲಿದ್ದ ಸ್ನೇಹಿತನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ತದ ಮಡುವಲ್ಲಿ ಬಿದಿದ್ದ ಹೈದರ್ ಅವರನ್ನು ಪೊಲೀಸರು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಷ್ಟರಲ್ಲಾಗಲೇ ಆನೆಪಾಳ್ಯ ನಿವಾಸಿ ಹೈದರ್ ಸಾವನ್ನಪ್ಪಿದ್ದರು.
ವಿಚಾರ ತಿಳಿದು ಬೌರಿಂಗ್ ಆಸ್ಪತ್ರೆ ಬಳಿ ನೂರಾರು ಜನ ಜಮಾಯಿಸಿದ್ದು, ಲಾಂಗು-ಮಚ್ಚು ಝಳಪಿಸಿ ಆಸ್ಪತ್ರೆ ಗೇಟ್ ತಳ್ಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






