ಬೆಂಗಳೂರು ಕಾಲ್ತುಳಿತ ಬೆನ್ನಲ್ಲೇ ದೆಹಲಿಗೆ ತೆರಳಿದ CM ಸಿದ್ದರಾಮಯ್ಯ, DCM ಡಿಕೆಶಿ.!

ಜೂನ್ 10, 2025 - 10:28
 0  10
ಬೆಂಗಳೂರು ಕಾಲ್ತುಳಿತ ಬೆನ್ನಲ್ಲೇ ದೆಹಲಿಗೆ ತೆರಳಿದ CM ಸಿದ್ದರಾಮಯ್ಯ, DCM ಡಿಕೆಶಿ.!

ಬೆಂಗಳೂರು: ಬುಧವಾರ ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗಡೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಟ್ಟಿದ್ದಾರೆ. ಪ್ರಕರಣ ಸಂಬಂಧಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು, ರಾಹುಲ್ ಗಾಂಧಿಯೊಂದಿಗೆ ಮಹತ್ವದ ಚರ್ಚೆ ಮಾಡಲಿದ್ದಾರೆ.

ಒಂದಲ್ಲ, ಎರಡಲ್ಲ ಬರೋಬ್ಬರಿ 11 ಜನ ಜೀವ ಪಡೆದ ಘೋರ ದುರಂತ, ಇಡೀದೇಶವನ್ನೇ ಕಂಗೆಡಿಸಿದೆ. ರಾಷ್ಟೀಯ ಮಟ್ಟದಲ್ಲೂ ಕರ್ನಾಟಕ ಸರಕಾರಕ್ಕೆ ಛೀಮಾರಿ ಜೊತೆ ಮುಜುಗರಕ್ಕೂ ಕಾರಣವಾಗಿತ್ತು.

ಇದೇ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ದ ಕಾಂಗ್ರೆಸ್ ಹೈಕಮಾಂಡ್ ಅಸಮಾಧಾನಗೊಂಡಿತ್ತು. ಘಟನೆ ನಡೆದ ದಿನವೇ ಪ್ರಾಥಮಿಕ ಮಾಹಿತಿ ಪಡೆದಿದ್ದ ವರಿಷ್ಠರು, ಈಗ ಸಂಪೂರ್ಣ ವರದಿ ಪಡೆಯಲಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​,​ ರಾಹುಲ್ ಗಾಂಧಿಯನ್ನ ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.

ವರದಿ ಒಪ್ಪಿಸಲಿರುವ ಸಿಎಂ ಸಿದ್ದರಾಮಯ್ಯ

  • ರಾಹುಲ್ ಗಾಂಧಿಗೆ ಕಾಲ್ತುಳಿತದ ಬಗ್ಗೆ ಸಿಎಂ ಸಿದ್ದರಾಮಯ್ಯ ಸಂಪೂರ್ಣ ಮಾಹಿತಿ ನೀಡಲಿದ್ದಾರೆ.
  • ಆರ್ಸಿಬಿ ಪರೇಡ್, ವಿಧಾನಸೌಧ ಕಾರ್ಯಕ್ರಮ, ಚಿನ್ನಸ್ವಾಮಿ ವಿಜಯೋತ್ಸವದ ಬಗ್ಗೆ ವರದಿ ಸಲ್ಲಿಕೆ.
  • ಘೋರ ಕಾಲ್ತುಳಿತದ ಟೈಮ್ ಲೈನ್ ವಿವರಿಸಲಿರುವ ಸಿಎಂ.
  • ಕಾಲ್ತುಳಿತಕ್ಕೆ ಕಾರಣವೇನು? ಯಾರ ಲೋಪದೋಷ, ಎಲ್ಲಿ ಎಡವಿದ್ದು? ಕೆಎಸ್ಸಿಎ ಪಾತ್ರವೇನು? ರಾಜ್ಯ ಸರ್ಕಾರದ ಪಾತ್ರದ ಕುರಿತು ವರದಿ ಸಲ್ಲಿಕೆ.
  • ಹಾಗೆಯೇ ವಿಜಯೋತ್ಸವದ ಹಿಂದಿನ ದಿನ ಜರುಗಿದ ಪತ್ರದ ವ್ಯವಹಾರ ಬಗ್ಗೆಯೂ ಚರ್ಚೆ.
  • ಕಾಲ್ತುಳಿತ ಪ್ರಕರಣವನ್ನು ವಿಪಕ್ಷಗಳು ಅಸ್ತ್ರ ಮಾಡಿಕೊಂಡಿವೆ ಅನ್ನೋದರ ಬಗ್ಗೆ ರಾಹುಲ್ಗೆ ಮನವರಿಕೆ.
  • ಈಗಾಗಲೇ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಸರ್ಕಾರದ ಕ್ರಮದ ಬಗ್ಗೆ ಮಾಹಿತಿ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow