ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ RCB

ಜೂನ್ 5, 2025 - 17:54
 0  15
ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ RCB

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ವಿಜಯೋತ್ಸವದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆಗೆ ಸಂಬಂಧಿಸಿದಂತೆ RCBಯಿಂದ ಮೃತರಿಗೆ ಪರಿಹಾರ ಧನ ಘೋಷಣೆ ಮಾಡಲಾಗಿದೆಪ್ರತಿಯೊಬ್ಬ ಮೃತರ ಕುಟುಂಬಕ್ಕೆ ಹತ್ತು ಲಕ್ಷ ಪರಿಹಾರ ಧನ ಘೋಷಣೆ ಮಾಡಿದೆ. ಇಷ್ಟೇ ಅಲ್ಲದೇ ಗಾಯಾಳುಗಳಿಗೂ ಕೂಡ ಹಣದ ವ್ಯವಸ್ಥೆ ಮಾಡುವುದಾಗಿ RCB ತಿಳಿಸಿದೆ.

ಬಗ್ಗೆ ಟ್ವಿಟರ್ ಖಾತೆಯಲ್ಲಿ ಬೆಂಗಳೂರಿನಲ್ಲಿ ನಿನ್ನೆ ನಡೆದ ದುರದೃಷ್ಟಕರ ಘಟನೆಯು ಆರ್ಸಿಬಿ ಕುಟುಂಬಕ್ಕೆ ತೀವ್ರ ನೋವು ಮತ್ತು ನೋವನ್ನುಂಟು ಮಾಡಿದೆ. ಗೌರವ ಮತ್ತು ಒಗ್ಗಟ್ಟಿನ ಸಂಕೇತವಾಗಿ, ಆರ್ಸಿಬಿ ಮೃತರ 11 ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿಗಳ ಆರ್ಥಿಕ ಸಹಾಯವನ್ನು ಘೋಷಿಸಿದೆ.

ಇದರ ಜೊತೆಗೆ, ದುರಂತ ಘಟನೆಯಲ್ಲಿ ಗಾಯಗೊಂಡ ಅಭಿಮಾನಿಗಳಿಗೂ ಆರ್ಸಿಬಿ ಕೇರ್ಸ್ ಎಂಬ ನಿಧಿಯನ್ನು ಸಹ ರಚಿಸಲಾಗುತ್ತಿದೆ. ನಮ್ಮ ಅಭಿಮಾನಿಗಳು ನಾವು ಮಾಡುವ ಎಲ್ಲದರಲ್ಲೂ ಯಾವಾಗಲೂ ಹೃದಯಭಾಗದಲ್ಲಿ ಇರುತ್ತಾರೆ. ನಾವು ದುಃಖದಲ್ಲಿ ಒಗ್ಗಟ್ಟಿನಿಂದ ಇರುತ್ತೇವೆ ಎಂದು ಬರೆದುಕೊಂಡಿದೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow