ಬೆಂಗಳೂರು ನನ್ನ ತವರು, ನಾನೊಬ್ಬ ಕನ್ನಡಿಗ: RCB ತಂಡದ ಬಗ್ಗೆ ರಾಹುಲ್ ಮೆಚ್ಚುಗೆ ಮಾತು!

ನವೆಂಬರ್ 14, 2024 - 09:37
 0  11
ಬೆಂಗಳೂರು ನನ್ನ ತವರು, ನಾನೊಬ್ಬ ಕನ್ನಡಿಗ: RCB ತಂಡದ ಬಗ್ಗೆ ರಾಹುಲ್ ಮೆಚ್ಚುಗೆ ಮಾತು!

IPL 2025ರ ಮೆಗಾ ಹರಾಜಿನಲ್ಲಿ ಈ ಬಾರಿ ಘಟಾನುಘಟಿಗಳೇ ಇದ್ದು, ಇದರಲ್ಲಿ ಕನ್ನಡಿಗ ರಾಹುಲ್ ಕೂಡ ಇದ್ದಾರೆ. 

ಕೆಎಲ್ ರಾಹುಲ್ ಈ ಹಿಂದಿನಿಂದಲೂ ತವರು ತಂಡದ ಪರ ಕಣಕ್ಕಿಳಿಯುವ ಇಂಗಿತ ವ್ಯಕ್ತಪಡಿಸುತ್ತಾ ಬಂದಿದ್ದಾರೆ. ಇದೀಗ ಮತ್ತೊಮ್ಮೆ ಆರ್​ಸಿಬಿ ಜೊತೆಗಿನ ನಂಟನ್ನು ತಿಳಿಸಿರುವ ರಾಹುಲ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿಯುವ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

ಖಾಸಗಿ ಚಾನೆಲ್​ವೊಂದರ ಸಂದರ್ಶನದಲ್ಲಿ ಮಾತನಾಡಿದ ಕೆಎಲ್ ರಾಹುಲ್, 2016 ರಲ್ಲಿ ಆರ್​ಸಿಬಿ ತಂಡದಲ್ಲಿದ್ದಾಗ, ನಾನು ಸಾಕಷ್ಟು ಎಂಜಾಯ್ ಮಾಡಿದ್ದೆ. ಅದರಲ್ಲೂ ಬೆಂಗಳೂರು ನನ್ನ ತವರೂರು. ಅಭಿಮಾನಿಗಳು ನನ್ನನ್ನು ಕನ್ನಡದ ಹುಡುಗ ಎಂದೇ ಕರೀತಾರೆ. ಈ ಎಲ್ಲಾ ಕಾರಣದಿಂದಾಗಿ ನನಗೆ ಬೆಂಗಳೂರು ಪರ ಕಣಕ್ಕಿಳಿಯುವುದು ವಿಶೇಷವಾಗಿತ್ತು ಎಂದು ತಿಳಿಸಿದ್ದಾರೆ.

ಈ ಮೂಲಕ ಕೆಎಲ್ ರಾಹುಲ್ ಮತ್ತೆ ಆರ್​ಸಿಬಿ ಪರ ಕಣಕ್ಕಿಳಿಯುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಈ ಇಂಗಿತವನ್ನು ಪೂರೈಸಲು ಈ ಬಾರಿಯ ಮೆಗಾ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕನ್ನಡಿಗನ ಖರೀದಿಗೆ ಬಿಡ್ ಮಾಡುವುದು ಅತ್ಯುತ್ತಮ ಆಯ್ಕೆ. ಏಕೆಂದರೆ ನಾಯಕ ಫಾಫ್ ಡುಪ್ಲೆಸಿಸ್ ಆರ್​ಸಿಬಿ ತಂಡದಿಂದ ಹೊರಬಿದ್ದಿದ್ದು, ಹಾಗೆಯೇ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಕೆಎಲ್ ರಾಹುಲ್ ಆಯ್ಕೆಯಿಂದ ಆರ್​ಸಿಬಿ ಇಬ್ಬರ ಸ್ಥಾನವನ್ನು ತುಂಬಬಹುದು.

ಅಂದಹಾಗೆ ಕೆಎಲ್ ರಾಹುಲ್ ಆರ್​ಸಿಬಿ ಪರ ಒಟ್ಟು 19 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 14 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಅವರು 4 ಅರ್ಧಶತಕಗಳೊಂದಿಗೆ ಒಟ್ಟು 417 ರನ್ ಕಲೆಹಾಕಿದ್ದಾರೆ. ಇದೀಗ ರಾಹುಲ್ ಮತ್ತೆ ತವರು ತಂಡದ ಪರ ಕಣಕ್ಕಿಳಿಯುವ ಇರಾದೆಯಲ್ಲಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow