ಬೆಳಗಾವಿ: ಅಂದು ಸಿಟಿ ರವಿ ಅವರನ್ನು ಇಡೀ ರಾತ್ರಿ ಗಲ್ಲಿ-ಗಲ್ಲಿ ಸುತ್ತಿಸಿದ್ದೇಕೆ ಪೊಲೀಸ್?

ಬೆಳಗಾವಿ:- ಸುವರ್ಣಸೌಧದಲ್ಲಿ ಸಿಟಿ ರವಿ ಅವರಿಗೆ ಅವಾಚ್ಯ ಪದ ಬಳಕೆ ಕೇಸ್ ಗೆ ಸಂಬಂಧಿಸಿದಂತೆ ಅಂದು ರಾತ್ರಿ ಸಿಟಿ ರವಿ ಅವರನ್ನು ಪೊಲೀಸರು ಅಮಾನವೀಯವಾಗಿ ನಡೆಸಿಕೊಂಡಿದ್ದಾರೆ.
ರಾತ್ರಿಯಿಡೀ ಸಿಟಿ ಅವರನ್ನು ವಿವಿಧ ಸ್ಥಳಗಳಿಗೆ ಕರೆದೊಯ್ದಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಈ ವಿಚಾರವಾಗಿ ಬೆಳಗಾವಿ ನಗರ ಪೊಲೀಸ್ ಆಯುಕ್ತರು ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಸಿಟಿ ರವಿಯನ್ನು ಸುತ್ತಾಡಿಸಿದ್ದಕ್ಕೆ ಕೊಟ್ಟ ಕಾರಣಗಳು ಇಲ್ಲಿವೆ ನೋಡಿ
ವಿಚಾರವಾಗಿ ಇದೀಗ ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಸ್ಪಷ್ಟನೆ ನೀಡಿದ್ದಾರೆ. ಸಿಟಿ ರವಿ ಅವರನ್ನು ರಾತ್ರಿಯೆಲ್ಲ ಸುತ್ತಾಡಿಸಿದ್ದೇಕೆ ಎಂಬುದಕ್ಕೆ ಕಾರಣ ನೀಡಿ ಅವರು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.
ಅಂದು ಹೆಚ್ಚಿನ ಪ್ರಮಾಣದ ಮಾಧ್ಯಮ ಪ್ರತಿನಿಧಿಗಳು, ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರು ಆಗಮಿಸುವ ಸಾಧ್ಯತೆ ಇದ್ದು. ಈ ಎಲ್ಲ ಅಂಶಗಳು ಸಹ ಸಾರ್ವಜನಿಕ ಸುವ್ಯವಸ್ಥೆ ಹಾಳು ಮಾಡುವ ಸಾಮರ್ಥ್ಯ ಹೊಂದಿದ್ದವು ಎಂದು ಯಡಾ ಮಾರ್ಟಿನ್ ಪ್ರಕಟಣೆಯಲ್ಲಿ ಉಲ್ಲೇಖಿಸಿದ್ದಾರೆ.
ಸಿಟಿ ರವಿ ರವರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಖಾನಾಪೂರದಿಂದ ಅವರನ್ನು ರಾಮದುರ್ಗಕ್ಕೆ ಸ್ಥಳಾಂತರಿಸಲಾಯಿತು. ಎಲ್ಲ ಮುನ್ನೆಚ್ಚರಿಕೆಗಳ ಹೊರತಾಗಿಯೂ ಮಾಧ್ಯಮಗಳು ಹಾಗೂ ಇನ್ನಿತರ ವ್ಯಕ್ತಿಗಳು ಬೆಂಗಾವಲು ಪಡೆಯನ್ನು ಹಿಂಬಾಲಿಸಿದರು. ಸಿಟಿ ರವಿ ಅವರ ಸುರಕ್ಷತೆ ಗಮನದಲ್ಲಿಟ್ಟುಕೊಂಡು ಬೆಂಗಾವಲು ಪಡೆಯು ಅವರೆಲ್ಲರಿಂದ ತಪ್ಪಿಸಿಕೊಳ್ಳುವ ಕ್ರಮಗಳನ್ನು ಕೈಕೊಂಡಿರುತ್ತಾರೆ. ಈ ಪ್ರಕ್ರಿಯೆಯುದ್ದಕ್ಕೂ ಪೊಲೀಸರು ಸಿಟಿ ರವಿ ಅವರಿಗೆ ಆಹಾರ ಮತ್ತು ವೈದ್ಯಕೀಯ ಸೇವೆ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಒದಗಿಸಿರುತ್ತಾರೆ. ಮರುದಿನ ರವಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ ಎಂದು ಮಾರ್ಟಿನ್ ತಿಳಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






