ಬೇಲೆಕೇರಿ ಅದಿರು ನಾಪತ್ತೆ ಕೇಸ್: ಶಾಸಕ ಸತೀಶ್ ಸೈಲ್ ಸೇರಿ ಎಲ್ಲಾ ಅಪರಾಧಿಗಳಿಗೆ ಜಾಮೀನು ಮಂಜೂರು!

ಬೆಂಗಳೂರು: ಬೇಲೇಕೇರಿ ಬಂದರಿನಲ್ಲಿ ಅಕ್ರಮವಾಗಿ ಅದಿರು ಸಾಗಾಟ ಮಾಡಿದ ಆರು ಪ್ರತ್ಯೇಕ ಕೇಸ್ಗಳಲ್ಲಿ ಅಪರಾಧಿ ಎಂದು ಘೋಷಿತರಾಗಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಬಿಗ್ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ಸತೀಶ್ ಸೈಲ್ ಸೇರಿ ಮೂರು ಮಂದಿಯ ಶಿಕ್ಷೆ ಅಮಾನತುಗೊಳಿಸಿ ಮಹತ್ವದ ಆದೇಶ ನೀಡಿದೆ.
ಕಳೆದ ಅಕ್ಟೋಬರ್ 26ರಂದು ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ 7 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಶಾಸಕ ಸತೀಶ್ ಸೈಲ್ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ರಂದು ಶಾಸಕ ಸತೀಶ್ ಸೈಲ್ ಸೇರಿ ಎಲ್ಲಾ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಆ ಮೂಲಕ ಶಾಸಕ ಸತೀಶ್ ಸೈಲ್ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಆದ್ರೆ ದಂಡದ ಮೊತ್ತದ ಶೇಕಡ 25% ರಷ್ಟು ಕಟ್ಟಲು ಹೈಕೋರ್ಟ್ ಆದೇಶದಲ್ಲಿ ತಿಳಿಸಿದೆ. ಇದರ ಜೊತೆಗೆ ಸೆಷನ್ ಕೋರ್ಟ್ನ ಆದೇಶವನ್ನು ಹೈಕೋರ್ಟ್ ಅಮಾನತು ಮಾಡಿದೆ. ಸೆಷನ್ಸ್ ಕೋರ್ಟ್ ಶಿಕ್ಷೆ ನೀಡಿದ್ದ 6 ಪ್ರಕರಣಗಳ ತೀರ್ಪನ್ನು ಹೈಕೋರ್ಟ್ ಅಮಾನತು ಮಾಡಿದೆ. ಸತೀಶ್ ಸೈಲ್ ಜೊತೆಗೆ ಎಲ್ಲಾ 7 ಮಂದಿ ಆರೋಪಿಗಳಿಗೂ ಜಾಮೀನು ನೀಡಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ನಿಮ್ಮ ಪ್ರತಿಕ್ರಿಯೆ ಏನು?






