ಭೀಕರ ಅಪಘಾತ: ನಡುರಸ್ತೆಯಲ್ಲೇ ಎರಡು ಲಾರಿ ಬೆಂಕಿಗಾಹುತಿ! ತಪ್ಪಿದ ದುರಂತ!

ಚಿಕ್ಕಬಳ್ಳಾಪುರ:- ಭೀಕರ ಅಪಘಾತದಲ್ಲಿ ನಡುರಸ್ತೆಯಲ್ಲೇ ಎರಡು ಲಾರಿ ಬೆಂಕಿಗಾಹುತಿ ಆಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹುನೇಗಲ್ ಗ್ರಾಮದಲ್ಲಿ ಜರುಗಿದೆ.
ಸಿಎನ್ಜಿ ಗ್ಯಾಸ್ ಸಿಲಿಂಡರ್ಗಳನ್ನು ತುಂಬಿದ್ದ ಕ್ಯಾಂಟರ್ವೊಂದಕ್ಕೆ ಗ್ರಾನೈಟ್ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಹಿಂದಿನಿಂದ ಡಿಕ್ಕಿ ಹೊಡೆದ ಕಾರಣ ಈ ಅವಘಡ ಸಂಭವಿಸಿದೆ. ಸಿಎನ್ಜಿ ಗ್ಯಾಸ್ ಸಿಲಿಂಡರ್ಗಳು ಸ್ಪೋಟಗೊಂಡು ನೂರು ಅಡಿ ಎತ್ತರ ಬೆಂಕಿಯ ಕೆನ್ನಾಲಿಗೆ ಚಿಮ್ಮಿದೆ. ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದ್ದು, ಎರಡೂ ಲಾರಿಗಳಲ್ಲಿದ್ದ ಚಾಲಕರು ಹಾಗೂ ಕ್ಲೀನರ್ಗಳಿಗೆ ಗಾಯಗಳಾಗಿವೆ.
ಸಿಎನ್ಜಿ ಗ್ಯಾಸ್ ಸಿಲೆಂಡರ್ಗಳನ್ನು ತುಂಬಿದ್ದ ಕ್ಯಾಂಟರ್ ಹುನೇಗಲ್ ಬಳಿ ಯೂ ಟರ್ನ್ ಮಾಡುತ್ತಿದ್ದಾಗ ಹಿಂದಿನಿಂದ ಬಂದ ಗ್ರಾನೈಟ್ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ರಭಸವಾಗಿ ಡಿಕ್ಕಿ ಹೊಡೆದಿದೆ. ಇದರಿಂದ ಸಿಎನ್ಜಿ ಗ್ಯಾಸ್ ಸಿಲೆಂಡರ್ಗಳು ಸ್ಪೋಟಗೊಂಡು ಬೆಂಕಿ ಆವರಿಸಿದೆ. ಬೆಂಕಿಯ ಕೆನ್ನಾಲಿಗೆ ನೂರು ಅಡಿ ಎತ್ತರ ಚಿಮ್ಮಿದ್ದು, ಸುತ್ತಮುತ್ತ ಇದ್ದ ಸ್ಥಳೀಯರು ಹಾಗೂ ವಾಹನ ಸವಾರರನ್ನು ಆತಂಕಕ್ಕೀಡು ಮಾಡಿತ್ತು.
ಘಟನೆಯಲ್ಲಿ ಎರಡೂ ಲಾರಿಗಳ ಇಬ್ಬರು ಚಾಲಕರು ಹಾಗೂ ಓರ್ವ ಕ್ಲೀನರ್ಗೆ ಸುಟ್ಟ ಗಾಯಗಳಾಗಿದ್ದು, ಅವರನ್ನು ಬೆಂಗಳೂರಿನ ವಿಕ್ಟೋರಿಯಾಗೆ ದಾಖಲಿಸಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






