ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಮೂವರು ದುರ್ಮರಣ!

ತುಮಕೂರು:- ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ತುಮಕೂರು ತಾಲೂಕಿನ ಓಬಳಾಪುರ ಗ್ರಾಮದ ಬಳಿ ಜರುಗಿದೆ.
ಮಧುಗಿರಿ ತಾಲೂಕಿನ ಗುಡ್ಡೆನಹಳ್ಳಿ ಗ್ರಾಮದ ನಿವಾಸಿಗಳಾದ 12 ವರ್ಷದ ಮಹಮ್ಮದ್ ಆಸೀಫ್, 38 ವರ್ಷದ ಮಮ್ತಾಜ್ , 18 ವರ್ಷದ ಶಾಖಿರ್ ಹುಸೇನ್ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಎಸ್ಪಿ ಅಶೋಕ್ ವೆಂಕಟ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತುಮಕೂರು ಕಡೆಯಿಂದ ಮಧುಗಿರಿಗೆ ಹೋಗುವಾಗ ಅಪಘಾತ ಸಂಭವಿಸಿದೆ. ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೈಕ್ ಡಿಕ್ಕಿ ಹೊಡೆದಿದೆ.
ಮಹಮ್ಮದ್ ಆಸೀಪ್, ಶಾಖಿರ್ ಹುಸೇನ್ ಮತ್ತು ತಾಯಿ ಮಮ್ತಾಜ್ ಮೂವರು ಸೋಮವಾರ ಸಂಜೆ ಶಿರಾ ಗೇಟ್ನಲ್ಲಿನ ಸಂಬಂಧಿ ಮನೆಗೆ ತೆರಳಿದ್ದರು. ಮಂಗಳವಾರ ಶಾಲೆ-ಕಾಲೇಜಿಗೆ ಹೋಗಬೇಕೆಂದು ಬೆಳಗಿನ ಜಾವ 6 ಗಂಟೆ ಸುಮಾರಿಗೆ ವಾಪಸ್ ಊರಿಗೆ ಹೋಗುತ್ತಿದ್ದರು. ಓಬಳಾಪುರ ಗ್ರಾಮದ ಬಳಿ ಬೈಕ್ ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಟ್ರ್ಯಾಕ್ಟರ್ ಟ್ರೇಲರ್ಗೆ ಡಿಕ್ಕಿ ಹೊಡೆದಿದೆ. ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ನಿಮ್ಮ ಪ್ರತಿಕ್ರಿಯೆ ಏನು?






