ಭ್ರಷ್ಟಾಚಾರ ಕೇಸ್: ಬಿಎಸ್ ವೈಗೆ ಸಂಕಷ್ಟ; ರಾಜ್ಯಪಾಲರ ಅಂಗಳದಲ್ಲಿದೆ ಯಡಿಯೂರಪ್ಪ ಭವಿಷ್ಯ!

ಬೆಂಗಳೂರು:- ಭ್ರಷ್ಟಾಚಾರ ಕೇಸ್ ಗೆ ಸಂಬಂಧಿಸಿದಂತೆ ಬಿಎಸ್ ಯಡಿಯೂರಪ್ಪಗೆ ಸಂಕಷ್ಟ ಎದುರಾಗಿದ್ದು, ರಾಜ್ಯಪಾಲರ ಅಂಗಳದಲ್ಲಿ ಯಡಿಯೂರಪ್ಪರ ಭವಿಷ್ಯ ನಿರ್ಧಾರ ಆಗಲಿದೆ.
ಈ ಮೂಲಕ ಮಾಜಿ ಸಿಎಂ ಯಡಿಯೂರಪ್ಪಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಯಡಿಯೂರಪ್ಪ ವಿರುದ್ದದ ಭ್ರಷ್ಟಾಚಾರ ಆರೋಪ ಪ್ರಕರಣದ ತನಿಖೆಗೆ ಪೂರ್ವಾನುಮತಿ ನೀಡಬೇಕು ಎಂದು ಕೋರಿ ರಾಜ್ಯಪಾಲರಿಗೆ ಸರ್ಕಾರ ನಿರ್ಣಯ ರವಾನಿಸಿದೆ.
ಟಿಜಿ ಅಬ್ರಾಹಂ ದೂರಿನ ಮೇಲೆ ಕ್ರಮಕ್ಕೆ ಪ್ರಾಸಿಕ್ಯೂಷನ್ಗೆ ಅನುಮತಿ ಕೇಳಲು ಕಳೆದ ವಾರ ಸಂಪುಟ ಸಭೆಯಲ್ಲಿ ನಿರ್ಣಯ ಅಂಗೀಕಾರ ಮಾಡಲಾಗಿತ್ತು. ಮಂಗಳವಾರ ರಾಜ್ಯಪಾಲರ ಅನುಮತಿಗಾಗಿ ಸರ್ಕಾರ ನಿರ್ಣಯವನ್ನು ಶಿಫಾರಸು ಮಾಡಿದೆ.
ಈ ಹಿಂದೆ ಸಚಿವ ಸಂಪುಟದಲ್ಲಿ ತೆಗೆದುಕೊಂಡ ತೀರ್ಮಾನದಂತೆ ಬಿಡಿಎ ಹೌಸಿಂಗ್ ನಿರ್ಮಾಣ ಪ್ರಕರಣದಲ್ಲಿ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ಇಂದು ಸರ್ಕಾರ, ರಾಜ್ಯಪಾಲರಿಗೆ ಕಡತ ರವಾನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಏನಾಗುತ್ತೋ ಏನೋ ಎಂದು ಬಿಎಸ್ವೈಗೆ ಢವಢವ ಶುರುವಾಗಿದೆ.
ಬಿಡಿಎ ಹೌಸಿಂಗ್ ನಿರ್ಮಾಣ ಪ್ರಕರಣ ಸಂಬಂಧ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿಗೆ ಅನುಮತಿ ಕೋರಿ ಮತ್ತೊಮ್ಮೆ ರಾಜ್ಯಪಾಲರಿಗೆ ಮನವಿ ಮಾಡಲು ಕಳೆದ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು. ಅದರಂತೆ ಇಂದು ರಾಜ್ಯಪಲಾರಿಗೆ ಬಿಎಸ್ವೈ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಿ ಕಡತ ರವಾನಿಸಿದೆ. ಆದ್ರೆ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನುವುದರ ಮೇಲೆ ಬಿಎಸ್ವೈ ಭವಿಷ್ಯ ನಿರ್ಧಾರವಾಗಲಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಜೆ ಅಬ್ರಾಹಂ ದೂರಿನ ಮೇರೆಗೆ 2020ರಲ್ಲೂ ರಾಜ್ಯಪಾಲರಿಗೆ ಅನುಮತಿ ಕೋರಿ ಕಡತ ಮಂಡಿಸಲಾಗಿತ್ತು. ಆದರೆ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಲು ರಾಜ್ಯಪಾಲರು ತಿರಸ್ಕರಿಸಿದ್ದರು. ಈಗ ಮತ್ತೊಮ್ಮೆ ಸಿದ್ದರಾಮಯ್ಯ ಸರ್ಕಾರ, ಅನುಮತಿ ಮರುಪರಿಶೀಲಿಸುವಂತೆ ಕೋರಿ ಕಡತ ಕಳುಹಿಸಿದೆ.
ಆದರೆ ಅಂತಿಮವಾಗಿ ರಾಜ್ಯಪಾಲರು ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುವುದನ್ನು ಕಾದುನೋಡಬೇಕಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






