ಮಂಡ್ಯದ ಎಲ್ಲಾ ಪಕ್ಷದವ್ರು ಕೈಗೆ ಬಳೆ ತೊಟ್ಕೊಳ್ಬೇಡ್ರಿ ಕಣ್ರಪ್ಪ: ನಾಲಿಗೆ ಹರಿಬಿಟ್ಟ ಮಾಜಿ ಸಂಸದ

ಅಕ್ಟೋಬರ್ 26, 2024 - 12:05
 0  29
ಮಂಡ್ಯದ ಎಲ್ಲಾ ಪಕ್ಷದವ್ರು ಕೈಗೆ ಬಳೆ ತೊಟ್ಕೊಳ್ಬೇಡ್ರಿ ಕಣ್ರಪ್ಪ: ನಾಲಿಗೆ ಹರಿಬಿಟ್ಟ ಮಾಜಿ ಸಂಸದ

ಮಂಡ್ಯ: ಎಲ್ಲಾ ಪಕ್ಷದವ್ರಿಗೂ ಕರೆ ಕೊಡ್ತಿನಿ ನೀವು ಗಂಡಸ್ರಾಗಿ, ಬಳೆ ತೊಟ್ಟುಕೊಳ್ಳಬೇಡಿ ಕಣ್ರೋ ಎನ್ನುವು ಮೂಲಕ ಎಲ್.ಆರ್ ಶಿವರಾಮೇಗೌಡ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ನಾನು ಬಿಜೆಪಿಗೆ ರಾಜೀನಾಮೆ ನೀಡಿದ್ದೇನೆ, ಕಾಂಗ್ರೆಸ್ ಸೇರಲು ನಿರ್ಧಾರ ಮಾಡಿದ್ದೇನೆ. ಸಿ.ಪಿ.ಯೋಗೇಶ್ವರ್ ರೀತಿ ನಾನು ಕೂಡ ಜಂಪಿಂಗ್ ಸ್ಟಾರ್‌‌. ಸಂಸದ ಡಾ. ಮಂಜುನಾಥ್ ಅವರನ್ನು ಅಭ್ಯರ್ಥಿ ಮಾಡಲು ಸಿಪಿ ಯೋಗೇಶ್ವರ್​ ಶ್ರಮವಹಿಸಿದರು. ಆದರೆ ಚನ್ನಪಟ್ಟಣದಲ್ಲಿ ಯೋಗೇಶ್ವರ್‌ ಅವರನ್ನೇ ಬಲಿ ಪಡೆದಿದ್ದಾರೆ. ಚನ್ನಪಟ್ಟಣ ಜನ ದಡ್ಡರಲ್ಲ, ಸಿ.ಪಿ.ಯೋಗೇಶ್ವರ್ ಗೆಲುವು ನಿಶ್ಚಿತ ಎಂದು ಭವಿಷ್ಯ ನುಡಿದರು.

ಚನ್ನಪಟ್ಟಣದಲ್ಲಿ ನಿಖಿಲ್ ಅಲ್ಲ ಹೆಚ್​ಡಿ ಕುಮಾರಸ್ವಾಮಿ ನಿಂತರೂ ಗೆಲ್ಲಲು ಆಗಲ್ಲ. ಬಿವೈ ವಿಜಯೇಂದ್ರ, ಬಿಎಸ್ ಯಡಿಯೂರಪ್ಪ​ ಅವರಿಂದ ಸಿಪಿ ಯೋಗೇಶ್ವರ್ ಬಿಜೆಪಿ ತೊರೆದರು. ಬಿಜೆಪಿಯಲ್ಲಿನ ಗುಂಪುಗಾರಿಕೆಯಿಂದ ಯೋಗೇಶ್ವರ್ ಪಕ್ಷ ಬಿಟ್ಟರು. ಹೆಚ್​.ಡಿ.ಕುಮಾರಸ್ವಾಮಿ ಅವರು ಎರಡನೇ ಬಾರಿ ಲಾಟರಿಯಲ್ಲಿ ಸಿಎಂ ಆದವರು‌. ಕಳೆದ ಚುನಾವಣೆಯಲ್ಲಿ ಕುಮಾರಸ್ವಾಮಿ ಗಾಡಿ ನಿಂತು ಹೋಗಿತ್ತು. ಪಾಪ ಮುಳುಗುವ ಹಡಗು ಎಂದು ಮಂಡ್ಯ ಜನರ ಕೈ ಹಿಡಿದರು ಎಂದು ವ್ಯಂಗ್ಯವಾಡಿದರು.

ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow