ಮದ್ವೆಯಾದ 1 ವರ್ಷಕ್ಕೆ ಘೋರ ದುರಂತ: ಭೀಮನ ಅಮಾವಾಸ್ಯೆಯಂದೇ ಮಹಿಳೆ ಅನುಮಾನಾಸ್ಪದ ಸಾವು!

ಜುಲೈ 25, 2025 - 20:27
 0  19
ಮದ್ವೆಯಾದ 1 ವರ್ಷಕ್ಕೆ ಘೋರ ದುರಂತ: ಭೀಮನ ಅಮಾವಾಸ್ಯೆಯಂದೇ ಮಹಿಳೆ ಅನುಮಾನಾಸ್ಪದ ಸಾವು!

ನೆಲಮಂಗಲ:- ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯ ಗ್ರಾಮದಲ್ಲಿ ಮಹಿಳೆಯೊಬ್ಬಳು ಅನುಮಾನಾಸ್ಪವಾಗಿ ಸಾವನ್ನಪ್ಪಿರುವ ಘಟನೆ ಜರುಗಿದೆ. 

24 ವರ್ಷದ ಸ್ಪಂದನಾ ಮೃತ ಮಹಿಳೆ. ಗುರುವಾರ ಭೀಮನ ಅಮಾವಾಸ್ಯೆ ಹಿನ್ನೆಲೆ ಪತಿ ಅಭಿಷೇಕ್, ಹೆಂಡತಿ ಕೈಯಲ್ಲಿ ಪೂಜೆ ಮಾಡಿಸಿಕೊಂಡಿದ್ದ ಎನ್ನಲಾಗಿದೆ. ಸ್ಪಂದನಾ ಕಾಲೇಜಿಗೆ ಹೋಗುತ್ತಿದ್ದ ಸಮಯದಲ್ಲಿ ಅಭಿಷೇಕ್ ಎಂಬಾತನನ್ನು ಪ್ರೀತಿಸಿ ರಿಜಿಸ್ಟರ್‌ ಮ್ಯಾರೇಜ್ ಆಗಿದ್ದಳು. ಸ್ಪಂದನಾ ಪೋಷಕರ ವಿರೋಧದ ನಡುವೆಯೇ ಇಬ್ಬರು ಮದುವೆಯಾಗಿದ್ದರು. ಮದುವೆಯಾದ ಬಳಿಕ ಪತಿ ಕುಟುಂಬಸ್ಥರು ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದ ಬಗ್ಗೆ ಸ್ಪಂದನಾ ತಂದೆ ಬಳಿ ಹೇಳಿಕೊಂಡಿದ್ದಳು. ಬಳಿಕ 5 ಲಕ್ಷ ರೂ. ಹಣವನ್ನ ಕೊಟ್ಟು ರಾಜಿ ಸಂಧಾನ ಮಾಡಿಸಿದ್ದರು. 

ಅತ್ತೆ ಮಾತನ್ನ ಕೇಳಿ ನನ್ನ ಗಂಡ ಕಿರುಕುಳ ಕೊಡ್ತಿದ್ದಾನೆ ಎಂದು ಬುಧವಾರ ತಂದೆಗೆ ಕರೆ ಮಾಡಿ ಸ್ಪಂದನಾ ಕಣ್ಣೀರಿಟ್ಟಿದ್ದಳು. ಸ್ವಲ್ಪ ಹೊತ್ತು ಬಿಟ್ಟು ಮತ್ತೆ ಕರೆ ಮಾಡಿ ನಿಮ್ಮ ಮಗಳು ಸಾವನ್ನಪ್ಪಿದ್ದಾಳೆ ಎಂದು ಪತಿ ಕುಟುಂಬಸ್ಥರು ತಿಳಿಸಿದ್ದರು. ಆಸ್ಪತ್ರೆಗೆ ಹೋಗಿ ನೋಡಿದಾಗ ಮಗಳು ಸಾವನ್ನಪ್ಪಿರೋದು ಪತ್ತೆಯಾಗಿದೆ. 

ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow