ಮನಕಲಕುವ ಘಟನೆ: ಹೆತ್ತ ಮಕ್ಕಳ ಕಿರುಕುಳ ತಾಳಲಾರದೆ ಸಾವಿನ ಹಾದಿ ಹಿಡಿದ ವೃದ್ಧ ದಂಪತಿ!

ಅಕ್ಟೋಬರ್ 11, 2024 - 22:02
 0  7
ಮನಕಲಕುವ ಘಟನೆ: ಹೆತ್ತ ಮಕ್ಕಳ ಕಿರುಕುಳ ತಾಳಲಾರದೆ ಸಾವಿನ ಹಾದಿ ಹಿಡಿದ ವೃದ್ಧ ದಂಪತಿ!

ರಾಜಸ್ಥಾನ:- ರಾಜಸ್ಥಾನದ ನಾಗೌರ್‌ನಲ್ಲಿ ಮನಕಲಕುವ ಘಟನೆಯೊಂದು ಜರುಗಿದ್ದು, ಮಕ್ಕಳ ಕಿರುಕುಳದಿಂದ ಬೇಸತ್ತು ತಂದೆ-ತಾಯಿ ನೀರಿನ ಟ್ಯಾಂಕ್​ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ದಂಪತಿಯನ್ನು ಹಜಾರಿರಾಮ್ ಬಿಷ್ಣೋಯ್ ಮತ್ತು ಅವರ ಪತ್ನಿ ಚವಾಲಿ ದೇವಿ ಎಂದು ಗುರುತಿಸಲಾಗಿದ್ದು, ಕರ್ನಿ ಕಾಲೋನಿಯಲ್ಲಿರುವ ತಮ್ಮ ಮನೆಯೊಳಗಿನ ನೀರಿನ ಟ್ಯಾಂಕ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಎರಡು ದಿನಗಳಿಂದ ದಂಪತಿ ಕಾಣದ ಹಿನ್ನೆಲೆಯಲ್ಲಿ ಅನುಮಾನಗೊಂಡ ನೆರೆಹೊರೆಯವರು ದಂಪತಿಯ ಮಗನಿಗೆ ಮಾಹಿತಿ ನೀಡಿದ್ದಾರೆ. ನಂತರ ಮಗ ಸ್ಥಳೀಯ ಪೊಲೀಸರನ್ನು ಸಂಪರ್ಕಿಸಿದ್ದು, ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಟ್ಯಾಂಕ್‌ನ ಮುಚ್ಚಳ ತೆರೆದಿದ್ದು, ದಂಪತಿಯ ಮೃತದೇಹ ನೀರಿನಲ್ಲಿ ತೇಲುತ್ತಿರುವುದು ಕಂಡು ಬಂದಿದೆ.

ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ತಮ್ಮ ಪುತ್ರರು ಮತ್ತು ಸೊಸೆಯರಿಂದ ಕಿರುಕುಳ ನೀಡುತ್ತಿದ್ದಾರೆ ಎಂದು ದಂಪತಿ ಆತ್ಮಹತ್ಯೆ ಪತ್ರವನ್ನು ಮನೆಯ ಗೋಡೆಗಳ ಮೇಲೆ ಅಂಟಿಸಿದ್ದರು. ಮಕ್ಕಳು ತಮ್ಮ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ, ಪೊಲೀಸರ ಬಳಿ ಹೋದರೆ ರಾತ್ರಿ ಮಲಗಿದ್ದಾಗ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು ಎಂದು ಬರೆದಿದ್ದಾರೆ.

ಇನ್ನೂ ಶವಗಳನ್ನು ತೊಟ್ಟಿಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಠಾಣಾಧಿಕಾರಿ ಮನೀಶ್ ದೇವ್ ತಿಳಿಸಿದ್ದಾರೆ.

ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow