ಮಹಾಕುಂಭ ಮೇಳದಲ್ಲಿ ಭೀಕರ ಕಾಲ್ತುಳಿತ: 25ಕ್ಕೂ ಅಧಿಕ ಮಂದಿಗೆ ಗಾಯ, ಆಸ್ಪತ್ರೆಗೆ ದಾಖಲು!

ಜನವರಿ 29, 2025 - 12:00
 0  11
ಮಹಾಕುಂಭ ಮೇಳದಲ್ಲಿ ಭೀಕರ ಕಾಲ್ತುಳಿತ: 25ಕ್ಕೂ ಅಧಿಕ ಮಂದಿಗೆ ಗಾಯ, ಆಸ್ಪತ್ರೆಗೆ ದಾಖಲು!

ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಬುಧವಾರ ಮುಂಜಾನೆ ಕಾಲ್ತುಳಿತ ಸಂಭವಿಸಿದೆ. ಸುಮಾರು 25-30 ಮಹಿಳೆಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೌನಿ ಅಮವಾಸ್ಯೆಯಂದು ಅಮೃತ ಸ್ನಾನವು ಮಹಾ ಕುಂಭದ ಅತ್ಯಂತ ಮಹತ್ವದ ಆಚರಣೆಯಾಗಿದೆ. ಎರಡು ಡಜನ್‌ಗೂ ಹೆಚ್ಚು ಆಂಬ್ಯುಲೆನ್ಸ್ ವಾಹನಗಳು ರಕ್ಷಣಾ ಕಾರ್ಯಾಚರಣೆಗಾಗಿ ಸ್ಥಳಕ್ಕೆ ತಲುಪಿವೆ. 10 ಕೋಟಿಗೂ ಹೆಚ್ಚು ಭಕ್ತರು ಆಗಮಿಸುವ ನಿರೀಕ್ಷೆ ಇದೆ.

ರಾತ್ರಿ 1 ಗಂಟೆ ಸುಮಾರಿಗೆ ಅವಘಡ ಸಂಭವಿಸಿದೆ. ಮೌನಿ ಅಮವಾಸ್ಯೆಯಂದು ಸ್ನಾನ ಮಾಡಲು ಸಂಗಮದಲ್ಲಿ ಜನಜಂಗುಳಿ ಹೆಚ್ಚಾಗತೊಡಗಿತು. ಮುಖ್ಯ ಸಂಗಮದಲ್ಲಿ ಮಾತ್ರ ಸ್ನಾನ ಮಾಡಲು ಜನರು ಮುಗಿಬಿದ್ದರು. ಆಗ ಏಕಾಏಕಿ ಜನಸಾಗರದ ಒತ್ತಡದಿಂದಾಗಿ ನೂಕುನುಗ್ಗಲು ಉಂಟಾಯಿತು.

 ಸುತ್ತಲೂ ಕಿರುಚಾಟ ಶುರುವಾಯಿತು. ಕಾಲ್ತುಳಿತದಲ್ಲಿ 25 ರಿಂದ 30 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಹತ್ತಾರು ಆಂಬುಲೆನ್ಸ್ಗಳ ಸಹಾಯದಿಂದ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಘಟನೆ ನಡೆದ ಸ್ಥಳದಲ್ಲಿ ಭಕ್ತರ ಚಪ್ಪಲಿ, ಸಾಮಾನುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ ಎಂದು ವರದಿ ತಿಳಿಸಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow