ಮಹಾಕುಂಭ ಮೇಳದಲ್ಲಿ ಭೀಕರ ಕಾಲ್ತುಳಿತ: 25ಕ್ಕೂ ಅಧಿಕ ಮಂದಿಗೆ ಗಾಯ, ಆಸ್ಪತ್ರೆಗೆ ದಾಖಲು!

ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಬುಧವಾರ ಮುಂಜಾನೆ ಕಾಲ್ತುಳಿತ ಸಂಭವಿಸಿದೆ. ಸುಮಾರು 25-30 ಮಹಿಳೆಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೌನಿ ಅಮವಾಸ್ಯೆಯಂದು ಅಮೃತ ಸ್ನಾನವು ಮಹಾ ಕುಂಭದ ಅತ್ಯಂತ ಮಹತ್ವದ ಆಚರಣೆಯಾಗಿದೆ. ಎರಡು ಡಜನ್ಗೂ ಹೆಚ್ಚು ಆಂಬ್ಯುಲೆನ್ಸ್ ವಾಹನಗಳು ರಕ್ಷಣಾ ಕಾರ್ಯಾಚರಣೆಗಾಗಿ ಸ್ಥಳಕ್ಕೆ ತಲುಪಿವೆ. 10 ಕೋಟಿಗೂ ಹೆಚ್ಚು ಭಕ್ತರು ಆಗಮಿಸುವ ನಿರೀಕ್ಷೆ ಇದೆ.
ರಾತ್ರಿ 1 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ಮೌನಿ ಅಮವಾಸ್ಯೆಯಂದು ಸ್ನಾನ ಮಾಡಲು ಸಂಗಮದಲ್ಲಿ ಜನಜಂಗುಳಿ ಹೆಚ್ಚಾಗತೊಡಗಿತು. ಮುಖ್ಯ ಸಂಗಮದಲ್ಲಿ ಮಾತ್ರ ಸ್ನಾನ ಮಾಡಲು ಜನರು ಮುಗಿಬಿದ್ದರು. ಆಗ ಏಕಾಏಕಿ ಜನಸಾಗರದ ಒತ್ತಡದಿಂದಾಗಿ ನೂಕುನುಗ್ಗಲು ಉಂಟಾಯಿತು.
ಸುತ್ತಲೂ ಕಿರುಚಾಟ ಶುರುವಾಯಿತು. ಈ ಕಾಲ್ತುಳಿತದಲ್ಲಿ 25 ರಿಂದ 30 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಹತ್ತಾರು ಆಂಬುಲೆನ್ಸ್ಗಳ ಸಹಾಯದಿಂದ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಘಟನೆ ನಡೆದ ಸ್ಥಳದಲ್ಲಿ ಭಕ್ತರ ಚಪ್ಪಲಿ, ಸಾಮಾನುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ ಎಂದು ವರದಿ ತಿಳಿಸಿದೆ.
ನಿಮ್ಮ ಪ್ರತಿಕ್ರಿಯೆ ಏನು?






