ಮಹಾಲಕ್ಷ್ಮೀ ಕೊಲೆ ಪ್ರಕರಣ: ಬೆಂಗಳೂರು ಕಮಿಷನರ್ ಹೇಳಿದ್ದೇನು!?

ಸೆಪ್ಟೆಂಬರ್ 23, 2024 - 13:59
 0  13
ಮಹಾಲಕ್ಷ್ಮೀ ಕೊಲೆ ಪ್ರಕರಣ: ಬೆಂಗಳೂರು ಕಮಿಷನರ್ ಹೇಳಿದ್ದೇನು!?

ಬೆಂಗಳೂರು:- ಮಹಾಲಕ್ಷ್ಮೀ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಕಮಿಷನರ್ ದಯಾನಂದ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.  ಈ ಸಂಬಂಧ ಮಾತನಾಡಿದ ಅವರು,ಬೆಂಗಳೂರು ವೈಯಾಲಿಕಾವಲ್‌ ನಿವಾಸಿ ಮಹಾಲಕ್ಷ್ಮೀ ಕೊಲೆ  ಪ್ರಕರಣದ ಆರೋಪಿಯ ಗುರುತು ಪತ್ತೆಯಾಗಿದೆ. ಆರೋಪಿಗಾಗಿ ಹುಡುಕಾಟ ಮುಂದುವರೆದಿದ್ದು, ಶೀಘ್ರವೆ ಬಂಧಿಸುತ್ತೇವೆ. ಆರೋಪಿ ಹೊರ ರಾಜ್ಯದವನು ಎಂಬ ಮಾಹಿತಿ ಲಭ್ಯವಾಗಿದೆ. ಆತ ಬೆಂಗಳೂರಿನಲ್ಲಿ ವಾಸವಾಗಿದ್ದ ಎಂಬುವುದು ತಿಳಿದುಬಂದಿದೆ ಎಂದರು. 

ಇನ್ನೂ ಬೆಂಗಳೂರಿನಲ್ಲಿ ಗಣೇಶಮೂರ್ತಿ ಮೆರವಣಿಗೆ ವೇಳೆ ಗಲಾಟೆ ಆಗಿಲ್ಲ. ಅಲ್ಲದೇ, ಯಾವುದೇ ಅಹಿತಕರ ಘಟನೆ ಆಗಿಲ್ಲ ಎಂದು ತಿಳಿಸಿದರು.

ಸಿಸಿಬಿ ಪೊಲೀಸರು ಓರ್ವ ವಿದೇಶಿ ಪ್ರಜೆ ಮತ್ತು ಆತನ ಸಂಪರ್ಕದಲ್ಲಿದ್ದ ಮಹಿಳೆಯನ್ನು ಬಂಧಿಸಿದ್ದಾರೆ. ಬಂಧಿತರಿಂದ 1.5 ಕೋಟಿ ಮೌಲ್ಯದ ಒಂದು ಕೆಜಿ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ. ಈಗಾಗಲೇ ತನಿಖೆ ಮುಂದುವರೆದಿದೆ. ಆರೋಪಿ ಮೂಲತಃ ಆಫ್ರಿಕಾ ದೇಶದವನಾಗಿದ್ದು, 2018ರಲ್ಲಿ ಭಾರತಕ್ಕೆ ಬಂಧಿದ್ದನು. ಆತನ ಜೊತೆಗೆ ಸಿಕ್ಕ ಮಹಿಳಾ ಆರೋಪಿ ಕೂಡ ಕೃತ್ಯದಲ್ಲಿ ಭಾಗಿಯಾಗಿದ್ದವಳು ಎಂದು ತಿಳಿಸಿದರು

ಇತ್ತೀಚಿಗೆ ಸೈಬರ್​ ವಂಚನೆ ಪ್ರಕರಣಗಳು ಹೆಚ್ಚಾಗಿವೆ. ಇಂತಹ ಪ್ರಕರಣವನ್ನು ದಕ್ಷಿಣ ಸೆನ್ ವಿಭಾಗದ ಪೊಲೀಸರು ಬೇಧಿಸಿದ್ದಾರೆ. ಮೂವರು ಆರೋಪಿಗಳನ್ನು ಬಂಧಿಸಿಲಾಗಿದೆ. ಕೆಂಗೇರಿಯಲ್ಲಿ ಬಾಡಿಗೆ ರೂಂ ಪಡೆದು ಸಂಪರ್ಕ ಮಾಡಿ, ಹೌಸ್ ಅರೆಸ್ಟ್ ಎಂದು 10 ದಿನ ಬೆದರಿಸಿ ಓರ್ವರಿಂದ ಬರೊಬ್ಬರಿ 30 ಲಕ್ಷ ಹಣ ಪಡೆದಿದ್ದರು. ಬಳಿಕ ಇದು ಕಳ್ಳರ ಕೃತ್ಯ ಎಂದು ತಿಳಿದು ವಂಚನೆಗೆ ಒಳಗಾದವರು ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ನಾಲ್ವರಿಗಾಗಿ ಹುಡುಕಾಟ ನಡೆಸಿದ್ದೇವೆ ಎಂದರು.

ಹುಳಿಮಾವು ಪೊಲೀಸರು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 35 ಲಕ್ಷ ಮೌಲ್ಯದ ಮಾಲು ವಶಕ್ಕೆ ಪಡೆಯಲಾಗಿದೆ‌. ಆರೋಪಿಗಳಿಂದ 11 ಪ್ರಕರಣಗಳು ಬೆಳಕಿಗೆ ಬಂದಿವೆ. ಮೊದಲ ಆರೋಪಿಯ ಮೇಲೆ 24 ಪ್ರಕರಣ ದಾಖಲಾಗಿವೆ. ಎರಡನೇ ಆರೋಪಿ ವಿರುದ್ಧ 20 ಪ್ರಕರಣಗಳಿವೆ ಎಂದು ಮಾಹಿತಿ ನೀಡಿದರು.

ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow