ಮಹಿಳೆಯ ಬೆತ್ತಲೆ ವಿಡಿಯೋ ಮಾಡಿ ಬ್ಲ್ಯಾಕ್ ಮೇಲ್: ಕೇರಳ ದೇವಸ್ಥಾನದ ಅರ್ಚಕ ಬೆಂಗಳೂರಿನಲ್ಲಿ ಅರೆಸ್ಟ್..!

ಪ್ರತಿನಿತ್ಯ ಮಹಿಳೆಯರ ಮೇಲೆ ಒಂದಲ್ಲಾ ಒಂದು ರೀತಿಯ ಕಿರುಕುಳ, ದೌರ್ಜನ್ಯಗಳು ನಡೆಯುತ್ತಲೇ ಇವೆ. ಕೆಲ ಕಾಮ ಪಿಶಾಚಿಗಳಂತೂ ಮುಗ್ಧ ಹೆಣ್ಣುಮಕ್ಕಳನ್ನೇ ಗುರಿಯಾಗಿಸಿಕೊಂಡು ಅವರಿಗೆ ಕಿರುಕುಳ ನೀಡುವುದೋ ಅಥವಾ ಅವರ ಮೇಲೆ ಅತ್ಯಾಚಾರ ಎಸಗುವಂತಹದ್ದೋ ಮಾಡುತ್ತಿರುತ್ತಾರೆ. ಅಂತಹದ್ದೇ ಘಟನೆಯೊಂದು ಇದೀಗ ನಡೆದಿದ್ದು,
ಇಲ್ಲೊಬ್ಬ ಪುರೋಹಿತ ಕೂಡಾ ಪೂಜೆಯ ನೆಪದಲ್ಲಿ ಮಹಿಳೆಗೆ ಮಹಿಳೆ ಜತೆ ನಗ್ನ ವಿಡಿಯೋ ಕಾಲ್ ಮಾಡಿಸಿ, ನಂತರ ಪೂಜೆಯ ನೆಪದಲ್ಲಿ ಆಕೆಯನ್ನು ಕಾಡಿಗೆ ಕರೆದುಕೊಂಡು ಹೋಗಿ ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ, ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಲ್ಲಿ ಕೇರಳದ ಪೆರಿಂಗೋಟ್ಟುಕ್ಕಾರ ದೇವಸ್ಥಾನದ ಅರ್ಚಕ ಅರುಣ್ ಎಂಬಾತನನ್ನು ಬೆಂಗಳೂರಿನ ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ.
ಹೌದು ಪ್ರತಿಷ್ಠಿತ ಪೆರಿಗೊಟ್ಟುಕ್ಕಾರ ದೇವಾಲಯದ ಅರ್ಚಕ ಅರುಣ್ ಬಂಧಿತ ಆರೋಪಿ. ಪ್ರಕರಣ ಬೆಳಕಿಗೆ ಬಂದ ಬಳಿಕ ಮುಖ್ಯ ಅರ್ಚಕ ಉನ್ನಿ ದಾಮೋದರನ್ ಪರಾರಿಯಾಗಿದ್ದಾನೆ. ಮಹಿಳೆಯೊಬ್ಬರು ತನಗೆ ಮಾಟಮಂತ್ರ ಮಾಡಿಸಿದ್ದಾರೆಂದು ದೇವಸ್ತಾನಕ್ಕೆ ತೆರಳಿದ್ದರು. ಈ ವೇಳೆ ದೇವಾಲಯದ ಅರ್ಚಕ ಅರುಣ್ ಪರಿಚಯ ಆಗಿತ್ತು.
24,000 ರೂ. ಕೊಟ್ಟರೆ ಪೂಜೆ ಮಾಡೋದಾಗಿ ಅರುಣ್ ಹೇಳಿದ್ದ. ಬಳಿಕ ಮಹಿಳೆ ನಂಬರ್ ಪಡೆದು ಹೇಳಿದ ದಿನ ಬರುವಂತೆ ಸೂಚನೆ ಕೊಟ್ಟಿದ್ದ. ಇದಾದ ಬಳಿಕ ಮಹಿಳೆಗೆ ತಡರಾತ್ರಿಯಲ್ಲಿ ನಿರಂತರ ವಾಟ್ಸಪ್ ಕರೆ ಮಾಡುತ್ತಿದ್ದ. ತಾನು ಬೆತ್ತಲೆಯಾಗಿ ನಿಂತು ವಿಡಿಯೋ ಕರೆ ಮಾಡುತ್ತಿದ್ದ. ಅಲ್ಲದೇ ನಿಮಗೆ ಮಾಡಿರುವ ಮಾಟ ಮಂತ್ರ ಪರಿಹಾರ ಆಗಬೇಕಾದ್ರೆ ಸಂಪೂರ್ಣ ಬೆತ್ತಲಾಗುವಂತೆ ಪೀಡಿಸುತ್ತಿದ್ದ.
ಮಹಿಳೆ ಇದನ್ನ ನಿರಾಕರಿಸಿದ್ದಕ್ಕೆ ಬೆತ್ತಲಾಗಿಲ್ಲ ಅಂದ್ರೆ ನಿನ್ನ ಇಬ್ಬರು ಮಕ್ಕಳು ಸಾಯೋ ಹಾಗೆ ರಿಟರ್ನ್ ಪೂಜೆ ಮಾಡ್ತೀನಿ ಅಂತ ಬೆದರಿಕೆ ಹಾಕಿದ್ದ. ಅರ್ಚಕನ ಬೆದರಿಕೆಯಿಂದ ಮಹಿಳೆ ಬೆತ್ತಲಾಗಿದ್ದಳು. ಬಳಿಕ ಬೆತ್ತಲೆ ಆಗಿರೋದನ್ನ ಅರ್ಚಕ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದ.
ನಂತರ ಆ ವಿಡಿಯೋ ಇಟ್ಟುಕೊಂಡು ಕರೆದಾಗಲೆಲ್ಲ ಕೇರಳಕ್ಕೆ ಬರುವಂತೆ ಒತ್ತಾಯ ಮಾಡ್ತಿದ್ದ. ನೀನು ಬರುವಾಗ ಹೇಳು ರೂಂ ಬುಕ್ ಮಾಡ್ತೀನಿ ಅಂತ ಚಿತ್ರಹಿಂಸೆ ಕೊಟ್ತಿದ್ದ. ಇದರಿಂದ ಬೇಸತ್ತ ಮಹಿಳೆ ಅರ್ಚಕ ಅರುಣ್ ಹಾಗೂ ಮುಖ್ಯ ಅರ್ಚಕ ಉನ್ನಿ ದಾಮೋದರ್ ವಿರುದ್ಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಅಸಭ್ಯ ವರ್ತನೆ ಮತ್ತು ಕಾರಿನಲ್ಲಿ ಕರೆದೊಯ್ದು ಅತ್ಯಾಚಾರಕ್ಕೆ ಯತ್ನ ಎಂದು ಆರೋಪಿಸಿ ಮಹಿಳೆ ದೂರು ನೀಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಅರ್ಚಕ ಅರುಣ್ನನ್ನ ಬಂಧಿಸಿದ್ದಾರೆ. ಮುಖ್ಯ ಅರ್ಚಕ ಉನ್ನಿ ದಾಮೋದರನ್ ಪರಾರಿಯಾಗಿದ್ದು, ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






