ಮಾಣಿಪ್ಪಾಡಿಗೆ 150 ಕೋಟಿ ಆಮಿಷ ಆರೋಪ: ತಮ್ಮ ಮೇಲಿನ ಆರೋಪಕ್ಕೆ ವಿಜಯೇಂದ್ರ ಹೇಳಿದ್ದೇನು?

ಡಿಸೆಂಬರ್ 16, 2024 - 16:07
 0  10
ಮಾಣಿಪ್ಪಾಡಿಗೆ 150 ಕೋಟಿ ಆಮಿಷ ಆರೋಪ: ತಮ್ಮ ಮೇಲಿನ ಆರೋಪಕ್ಕೆ ವಿಜಯೇಂದ್ರ ಹೇಳಿದ್ದೇನು?

ಬೆಳಗಾವಿ:-ಮಾಣಿಪ್ಪಾಡಿಗೆ 150 ಕೋಟಿ ಆಮಿಷ ಆರೋಪಕ್ಕೆ ಸಂಬಂಧಿಸಿದಂತೆ ಸದನದಲ್ಲಿ ತಮ್ಮ ಮೇಲಿನ ಆರೋಪಕ್ಕೆ ವಿಜಯೇಂದ್ರ ಸ್ಪಷ್ಟನೆ ಕೊಡುವ ಯತ್ನ ಮಾಡಿದರು. 

ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ವಿಜಯೇಂದ್ರ, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ವಕ್ಫ್​ ಆಸ್ತಿ ಕಬಳಿಕೆ ಬಗ್ಗೆ ಅಲ್ಪಸಂಖ್ಯಾತರ ಆಯೋಗದ ಮಾಜಿ‌ ಅಧ್ಯಕ್ಷ ಅನ್ವರ್​ ಮಾಣಿಪ್ಪಾಡಿಗೆ 150 ಕೋಟಿ ರೂ. ಆಮಿಷವೊಡ್ಡಿದ ಆರೋಪದ ಬಗ್ಗೆ ಸಿಬಿಐ ತನಿಖೆಗೆ ವಹಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದರು.

ವಕ್ಫ್ ಆಸ್ತಿ ದುರುಪಯೋಗ ಕುರಿತು ಮಾಣಿಪ್ಪಾಡಿ ವರದಿ ಕೊಟ್ಟಿದ್ದರು. ನಂತರ ಉಪಲೋಕಾಯುಕ್ತ ನ್ಯಾ‌.ಆನಂದ್ ಅವರು ವರದಿ ಕೊಟ್ಟಿದ್ದರು. 2016ರಲ್ಲಿ ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ವರದಿ ನೀಡಿದ್ದರು. ಆದರೆ ಅಂದಿನ ಸಿಎಂ ಉಪಲೋಕಾಯುಕ್ತರ ವರದಿ ಮುಚ್ಚಿ ಹಾಕಿದ್ದರು. ಅಲ್ಪಸಂಖ್ಯಾತರ ಆಯೋಗದ ಹಿಂದಿನ‌ ಅಧ್ಯಕ್ಷರು ಸರ್ಕಾರಕ್ಕೆ ಶಿಫಾರಸು ಸಲ್ಲಿಸಿದ್ದನ್ನು ಸಿದ್ದರಾಮಯ್ಯ ಸಚಿವ ಸಂಪುಟ ತಿರಸ್ಕರಿಸಿತು. ಸಿಎಂ ಅವರಿಗೆ ಸಿಬಿಐ ಬಗ್ಗೆ ಬಹಳ ವಿಶ್ವಾಸ ಇದೆ. ನಾನು ಸಿಎಂಗೆ ಸವಾಲ್ ಹಾಕುತ್ತೇನೆ, 150 ಕೋ ರೂ. ಟಿ ಆಮಿಷ ಆರೋಪವನ್ನು ಸಿಬಿಐಗೆ ವಹಿಸಲಿ. ಜತೆಗೆ ಅನ್ವರ್ ಮಾಣಿಪ್ಪಾಡಿ ವರದಿಯ ತನಿಖೆಯನ್ನೂ ಸಿಬಿಐಗೆ ಕೊಡಲಿ ಎಂದು ವಿಜಯೇಂದ್ರ ಆಗ್ರಹಿಸಿದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow