ಮಾರ್ಚ್ 22 ರಂದು ಕರ್ನಾಟಕ ಬಂದ್ʼಗೆ ಕನ್ನಡಪರ ಸಂಘಟನೆಗಳಿಂದ ಕರೆ!

ಮಾ.22ರ ಬೆಳಗ್ಗೆ 6 ಗಂಟೆಯಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್ ಎಂದು ಹೋರಾಟಗಾರ ವಾಟಾಳ್ ನಾಗರಾಜ್ ಘೋಷಣೆ ಮಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬೆಂಗಳೂರಿನ ವುಡ್ ಲ್ಯಾಂಡ್ಸ್ ಹೋಟೆಲ್ನಲ್ಲಿ ಸಭೆ ನಡೆಸಲಾಗಿದ್ದು, ಬೆಳಗಾವಿಯಲ್ಲಿ ಸಾರಿಗೆ ಬಸ್ ಕಂಡಕ್ಟರ್ ಮೇಲೆ ನಡೆದ ಹಲ್ಲೆಯನ್ನು ಖಂಡಿಸಲಾಗಿದೆ. ಇದೇ ಸಭೆಯಲ್ಲಿ ‘ಕರ್ನಾಟಕ ಬಂದ್’ ದಿನಾಂಕ ಘೋಷಣೆ ಮಾಡಿದ್ದಾರೆ.
ಮಾ.3 ರಂದು ಬೆಳಗ್ಗೆ 11 ಗಂಟೆಗೆ ರಾಜಭವನ ಮುತ್ತಿಗೆ ಹಾಕಲಿದ್ದೇವೆ. ಮಾ.7ಕ್ಕೆ ಬೆಳಗಾವಿ ಚಲೋ ಕೈಗೊಳ್ಳುತ್ತೇವೆ. ಮಾ.11 ರಂದು ಮೇಕೆದಾಟು ಯೋಜನೆಗೆ ಆಗ್ರಹಿಸಿ ಅತ್ತಿಬೆಲೆ ತಮಿಳುನಾಡು ಗಡಿ ಬಂದ್ ಮಾಡಿ ಪ್ರತಿಭಟಿಸುತ್ತೇವೆ. ಮಾ.14 ರಂದು ಮೈಸೂರು, ಮಂಡ್ಯ, ರಾಮನಗರ ಡಿಸಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಸೇರಿದಂತೆ ಇಡೀ ಬೆಳಗಾವಿಯ ಎಲ್ಲಾ ಅಧಿಕಾರಿಗಳ ಬದಲಾವಣೆ ಆಗಬೇಕು. ಎಲ್ಲಾ ಕನ್ನಡ ಅಧಿಕಾರಿಗಳನ್ನ ಹಾಕಬೇಕು. ಎಂಇಎಸ್ ನಿಷೇಧ ಮಾಡಿ ಶಿವಸೇನೆ ಕಾರ್ಯಕರ್ತರನ್ನು ಗಡಿಪಾರು ಮಾಡಬೇಕು. ಸಾಂಬಾಜಿ ಪ್ರತಿಮೆ ತೆರವು ಮಾಡಬೇಕು. ಕೇಂದ್ರ ಸರ್ಕಾರ ರಾಜ್ಯಕ್ಕೆ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದರು.
ನಿಮ್ಮ ಪ್ರತಿಕ್ರಿಯೆ ಏನು?






