ಮಾಲೂರು ಚುನಾವಣೆ ಮತ ಎಣಿಕೆ ಸಿಸಿಟಿವಿ ದೃಶ್ಯಾವಳಿಯೇ ನಾಪತ್ತೆ!: ಹೈಕೋರ್ಟ್ ನೀಡಿರುವ ನಿರ್ದೇಶನ ಏನು?

ಮಾಲೂರು ಚುನಾವಣೆ ಮತ ಎಣಿಕೆ ಸಿಸಿಟಿವಿ ದೃಶ್ಯಾವಳಿಯೇ ನಾಪತ್ತೆ!: ಹೈಕೋರ್ಟ್ ನೀಡಿರುವ ನಿರ್ದೇಶನ ಏನು?
ಮಾಲೂರು ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯದ ಸಂಪೂರ್ಣ ವಿಡಿಯೊ (ಸಿಸಿ ಟಿವಿ ದೃಶ್ಯಾವಳಿ) ನಾಪತ್ತೆಯಾಗಿರುವ ಕುರಿತು ಪ್ರಮಾಣಪತ್ರ ಸಲ್ಲಿಸುವಂತೆ ಹೈಕೋರ್ಟ್, ಚುನಾವಣೆ ಸಂದರ್ಭದಲ್ಲಿ ಜಿಲ್ಲಾ ಚುನಾವಣಾಧಿಕಾರಿಯಾಗಿದ್ದ ಸದ್ಯ ಕೊಡಗು ಡಿಸಿ ಆಗಿರುವ ವೆಂಕಟರಾಜ ಅವರಿಗೆ ನಿರ್ದೇಶನ ನೀಡಿದೆ.
ಮಾಲೂರು ಕ್ಷೇತ್ರದ ಶಾಸಕರಾಗಿ ಕಾಂಗ್ರೆಸ್ನ ಕೆ.ವೈ. ನಂಜೇಗೌಡ ಆಯ್ಕೆಯಾಗಿರುವುದನ್ನು ಅನೂರ್ಜಿತಗೊಳಿಸುವಂತೆ ಕೋರಿ ಬಿಜೆಪಿ ಪರಾಜಿತ ಅಭ್ಯರ್ಥಿ ಕೆ ಎಸ್ ಮಂಜುನಾಥ್ಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ಏಕಸದಸ್ಯ ಪೀಠ ಮಂಗಳವಾರ ಈ ನಿರ್ದೇಶನ ನೀಡಿದೆ.
ಹಿಂದಿನ ವಿಚಾರಣೆ ವೇಳೆ ನ್ಯಾಯಾಲಯ, ಮತ ಎಣಿಕೆ ಕಾರ್ಯದ ಸಂಪೂರ್ಣ ವಿಡಿಯೊ ದೃಶ್ಯಾವಳಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು. ವಿಫಲವಾದಲ್ಲಿ ಕೋಲಾರ ಜಿಲ್ಲಾ ಚುನಾವಣಾಧಿಕಾರಿ ಆಗಸ್ಟ್ 27ರಂದು ಖುದ್ದು ವಿಚಾರಣೆಗೆ ಹಾಜರಾಗಬೇಕೆಂದು ಹೇಳಿತ್ತು. ಅದರಂತೆ, ಸದ್ಯ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಹಾಲಿ ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ನ್ಯಾಯಾಲಯದ ಮುಂದೆ ಮಂಗಳವಾರ ಹಾಜರಾಗಿದ್ದರು.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






