ಮುಖ್ಯಮಂತ್ರಿ ಆಯ್ಕೆ ನಿರ್ಧಾರವನ್ನು ಬಿಜೆಪಿ ಹೈಕಮಾಂಡ್ʼಗೆ ಬಿಡಲಾಗಿದೆ: ಏಕನಾಥ್ ಶಿಂಧೆ

ನವೆಂಬರ್ 27, 2024 - 17:52
 0  13
ಮುಖ್ಯಮಂತ್ರಿ ಆಯ್ಕೆ ನಿರ್ಧಾರವನ್ನು ಬಿಜೆಪಿ ಹೈಕಮಾಂಡ್ʼಗೆ ಬಿಡಲಾಗಿದೆ: ಏಕನಾಥ್ ಶಿಂಧೆ

ಮಹಾರಾಷ್ಟ್ರ: ಬಿಜೆಪಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರವನ್ನು ನಾವು ಗೌರವಿಸುತ್ತೇವೆ ಎಂದು ಏಕನಾಥ್ ಶಿಂಧೆ ಹೇಳಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಆಯ್ಕೆ ನಿರ್ಧಾರವನ್ನು ಬಿಜೆಪಿ ಹೈಕಮಾಂಡ್​​ಗೆ ಬಿಡಲಾಗಿದೆ. ಯಾಕಂದ್ರೆ ಮಹಾರಾಷ್ಟ್ರದಲ್ಲಿ ನಮ್ಮ ಸರ್ಕಾರದ ಗೆಲುವಿಗೆ ನಮ್ಮ ಬೆನ್ನೆಲುಬಾಗಿ ನಿಂತಿದ್ದು ಬಿಜೆಪಿ. ಹೀಗಾಗಿ, ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯ ಆಯ್ಕೆಯನ್ನು ಕೂಡ ನರೇಂದ್ರ ಮೋದಿಯವರಿಗೆ ಬಿಟ್ಟಿದ್ದೇನೆ. ಅವರ ನಿರ್ಧಾರವೇ ಅಂತಿಮ. ಬಿಜೆಪಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರವನ್ನು ನಾವು ಗೌರವಿಸುತ್ತೇವೆ ಎಂದು ಹೇಳಿದ್ದಾರೆ.

ಸಿಎಂ ಆಯ್ಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ನಿರ್ಧಾರ ಮಾಡುತ್ತಾರೆ. ಮುಖ್ಯಮಂತ್ರಿ ಸ್ಥಾನದ ಆಸೆ ನನಗೆ ಇಲ್ಲ. ನಾನು ಯಾವುದೇ ನಿರ್ಧಾರಕ್ಕೂ ಬದ್ಧ ಎಂದು ಪಿಎಂ ಮೋದಿಗೆ ಹೇಳಿದ್ದೇನೆ. ನಿನ್ನೆ ನಾನು ಪ್ರಧಾನಮಂತ್ರಿ ಮೋದಿ, ಅಮಿತ್ ಶಾಗೆ ಕರೆ ಮಾಡಿದ್ದೆ. ಅವರು ಯಾವುದೇ ನಿರ್ಧಾರ ತೆಗೆದುಕೊಂಡರೂ ಬದ್ಧ ಎಂದು ಹೇಳಿದ್ದೇನೆ. ಸರ್ಕಾರ ರಚನೆಯಾಗಲು ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಹೇಳಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow