ಮುಗ್ಧ ಜನರ ಮೇಲಿನ ದಾಳಿ ಊಹಿಸಲು ಅಸಾಧ್ಯ: ರಾಕಿಂಗ್ ಸ್ಟಾರ್ ಯಶ್ ಹೇಳಿದ್ದೇನು?

ಎಪ್ರಿಲ್ 23, 2025 - 16:00
 0  13
ಮುಗ್ಧ ಜನರ ಮೇಲಿನ ದಾಳಿ ಊಹಿಸಲು ಅಸಾಧ್ಯ: ರಾಕಿಂಗ್ ಸ್ಟಾರ್ ಯಶ್ ಹೇಳಿದ್ದೇನು?

ಜಮ್ಮು-ಕಾಶ್ಮೀರದಲ್ಲಿ ನಡೆದ ಭೀಕರ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಕಿಂಗ್ ಸ್ಟಾರ್ ಯಶ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. 

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಮುಗ್ಧ ಜನರ ಕ್ರೂರ ಹತ್ಯೆಯಿಂದ ತೀವ್ರ ದುಃಖವಾಗಿದೆ. ಮುಗ್ಧ ಜನರ ಮೇಲಿನ ದಾಳಿಯನ್ನು ಊಹಿಸಲು ಸಾಧ್ಯವಿಲ್ಲ. ಈ ಭೀಕರ ದುರಂತದಲ್ಲಿ ಸಂತ್ರಸ್ತರ ಕುಟುಂಬಗಳು ಮತ್ತು ರಾಷ್ಟ್ರದೊಂದಿಗೆ ದೃಢವಾಗಿ ನಿಲ್ಲುತ್ತೇವೆ ಎಂದು ಬರೆದುಕೊಂಡಿದ್ದಾರೆ.

ಮುಗ್ಧ ಜೀವಗಳು ಪಹಲ್ಗಾಮ್‌ನಲ್ಲಿ ಬಲಿಯಾಗಿರೋದು ಕೇಳಿ ಆಘಾತವಾಗಿದೆ. ಈ ದುರಂತದಲ್ಲಿ ದುಃಖದಲ್ಲಿರುವ ಕುಟುಂಬಕ್ಕೆ ನನ್ನ ಪ್ರಾರ್ಥನೆಗಳು ಎಂದು ನಟಿ ರಾಧಿಕಾ ಪಂಡಿತ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಇನ್ನೂ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 27 ಹಿಂದೂಗಳನ್ನು ಕೊಂದಿರುವ ಉಗ್ರರ ನೀಚತನದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ರಿಯಾಕ್ಟ್ ಮಾಡಿದ್ದಾರೆ. ಮುಗ್ಧ ಜನರ ಕ್ರೂರ ಹತ್ಯೆಯಿಂದ ತೀವ್ರ ದುಃಖವಾಗಿದೆ ಎಂದು ಯಶ್ ಹೇಳಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow