ಮುಡಾ ಹಗರಣ: CBI ತನಿಖೆ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ಜನವರಿ 15ಕ್ಕೆ ಮುಂದೂಡಿಕೆ

ಬೆಂಗಳೂರು: ಮುಡಾ ಕೇಸ್ನಲ್ಲಿ ಸಿಬಿಐ ತನಿಖೆ ಶುರು ಮಾಡಲಿದ್ಯಾ? ಇಲ್ವಾ? ಅನ್ನೋದು ಜನವರಿ 15ಕ್ಕೆ ನಿರ್ಧಾರವಾಗಲಿದೆ. ಈ ಪ್ರಕರಣದಲ್ಲಿ ಸಿಬಿಐ ತನಿಖೆ ಕೋರಿ ಹೈಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ಜನವರಿ 15ಕ್ಕೆ ಮುಂದೂಡಿಕೆಯಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದಲ್ಲಿ ಈಗಾಗಲೇ ಹಲವು ಏಜೆನ್ಸಿಗಳು ತನಿಖೆ ನಡೆಯುತ್ತಿದೆ.
ಒಂದೆಡೆ ಇಡಿ ತನಿಖೆ ನಡೆಸುತ್ತಿದ್ದರೆ, ಇನ್ನೊಂದೆಡೆ ಲೋಕಾಯುಕ್ತ ಪೊಲೀಸರ ತನಿಖೆ ಕೂಡ ನಡೆಯುತ್ತಿದೆ. ಈ ನಡುವೆ ಪ್ರಕರಣ ಸಿಬಿಐಗೆ ಕೋರಿದ್ದ ಅರ್ಜಿ ಇಂದು ಹೈಕೋರ್ಟ್ ಅಲ್ಲಿ ವಿಚಾರಣೆಗೆ ಬಂದಿತ್ತು.
ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಕೈಗೆತ್ತಿಕೊಂಡರು. ವಿಚಾರಣೆ ವೇಳೆ ಹಾಜರಾಗಿದ್ದ ಸಿದ್ದರಾಮಯ್ಯ ಬಾಮೈದುನ ಮಲ್ಲಿಕಾರ್ಜುನ ಸ್ವಾಮಿ ಪರ ವಕೀಲರು, ಎರಡು ದಿನಗಳ ಹಿಂದೆಯಷ್ಟೇ ನೋಟಿಸ್ ಜಾರಿಯಾಗಿದೆ. ಅದಕ್ಕೆ ಆಕ್ಷೇಪಣೆ ಸಿದ್ದಪಡಿಸಬೇಕಾಗಿದೆ. ಆದ್ದರಿಂದ ಅರ್ಜಿಯ ವಿಚಾರಣೆಯನ್ನು ಮುಂದೂಡಬೇಕು ಎಂದು ಮನವಿ ಮಾಡಿದರು.
ಸಿದ್ದರಾಮಯ್ಯ ಪತ್ನಿ ಪರ ಹಾಜರಿದ್ದ ವಕೀಲರು, ನೋಟಿಸ್ ತಲುಪಿದೆ. ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು. ಇದೇ ವೇಳೆ, "ಈ ಹಿಂದೆ ಜನವರಿ 28ರವರೆಗೆ ಅಂತಿಮ ವರದಿ ಸಲ್ಲಿಸುವುದಕ್ಕೆ ಕಾಲಾವಕಾಶ ನೀಡಲಾಗಿತ್ತು. ಇದೀಗ ಸಲ್ಲಿಕೆಗೆ ಕಾಲಾವಕಾಶ ನೀಡುತ್ತಿದ್ದೇನೆ" ಎಂದು ತಿಳಿಸಿ ವಿಚಾರಣೆ ಮುಂದೂಡಿತು.
ನಿಮ್ಮ ಪ್ರತಿಕ್ರಿಯೆ ಏನು?






