ಮುಡಾ ಹಗರಣವನ್ನು ಖಂಡಿತ ನಾವೇ ಕ್ಲೀನ್ ಮಾಡುತ್ತೇವೆ: ಯತೀಂದ್ರ ಸಿದ್ದರಾಮಯ್ಯ

ನವೆಂಬರ್ 29, 2024 - 21:02
 0  7
ಮುಡಾ ಹಗರಣವನ್ನು ಖಂಡಿತ ನಾವೇ ಕ್ಲೀನ್ ಮಾಡುತ್ತೇವೆ: ಯತೀಂದ್ರ ಸಿದ್ದರಾಮಯ್ಯ

 

ಮೈಸೂರು: ಮುಡಾ ಹಗರಣವನ್ನು ಖಂಡಿತ ನಾವೇ ಕ್ಲೀನ್ ಮಾಡುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ರಾಜೀನಾಮೆಗೆ ವಿಪಕ್ಷಗಳ ಒತ್ತಾಯ ವಿಚಾರವಾಗಿ ರಾಜೀನಾಮೆ ಕೊಡಲು ಕಾರಣ ಇರಬೇಕು. ಸಿಎಂ ತಪ್ಪು ಮಾಡದೆ ಇದ್ದರೂ ತನಿಖಾ ಸಂಸ್ಥೆಯನ್ನ ಬಳಸಿಕೊಂಡು ರಾಜೀನಾಮೆಗೆ ಯತ್ನಿಸುತ್ತಿದ್ದಾರೆ. ಜನರು ಉಪಚುನಾವಣೆಯಲ್ಲಿ ನಮಗೆ ಬೆಂಬಲ ಸೂಚಿಸಿದ್ದಾರೆ.

 ನಮಗೆ ನೈತಿಕ ಸ್ಥೈರ್ಯ ಸಿಕ್ಕಿದೆ. ಹೀಗಾಗಿ ನಾವು ರಾಜೀನಾಮೆ ಕೊಡಲ್ಲ. ಮುಡಾದಲ್ಲಿ 50:50 ಅನುಪಾತದಲ್ಲಿ ಹಗರಣ ಆಗಿದೆ. ಇದನ್ನು ನಾನು ಒಪ್ಪಿಕೊಳ್ಳುತ್ತೇನೆ. ಮೇಲ್ನೋಟಕ್ಕೆ ಹಗರಣದ ಆಗಿದೆ ಎಂದು ಎಲ್ಲರೂ ಮಾತನಾಡುತ್ತಿದ್ದಾರೆ. ತನಿಖೆಯಿಂದ ಎಲ್ಲವೂ ಹೊರಬರಲಿದೆ.

ಇನ್ನೂ ನನ್ನ ತಂದೆ, ತಾಯಿ, ಮಾವನ ವಿರುದ್ಧ ಕಾನೂನುಬಾಹಿರವಾಗಿ ಬದಲಿ ಭೂಮಿ ಪಡೆದ ಆರೋಪದಲ್ಲಿ ಯಾವುದೇ ಸತ್ಯ ಇಲ್ಲ. ಇದು ತನಿಖಾ ಸಂಸ್ಥೆಗೂ ಸಹ ಗೊತ್ತಿದೆ. ಇಡಿಯಿಂದ ಮುಡಾ ಕ್ಲೀನ್ ಮಾಡಲು ಸಾಧ್ಯವಿಲ್ಲ. ಅದಕ್ಕಾಗಿ ಮುಡಾವನ್ನು ಕ್ಲೀನ್ ಮಾಡಲು ಆಯೋಗ ರಚನೆ ಮಾಡಿದ್ದೇವೆ. ಮುಡಾವನ್ನು ಖಂಡಿತ ನಾವೇ ಕ್ಲೀನ್ ಮಾಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow