ಮೂರು ಕ್ಷೇತ್ರಗಳಲ್ಲೂ ಶಾಂತಿಯುತ ಮತದಾನ: ಶೇಕಡಾವಾರು ಪ್ರಮಾಣ ಎಷ್ಟು? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಆರಂಭವಾಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ, ಬಳ್ಳಾರಿ ಜಿಲ್ಲೆಯ ಸಂಡೂರು, ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳಿಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ.
ಸಂಜೆ 6 ಗಂಟೆವರೆಗೆ ಮತದಾನ ಕಾರ್ಯ ನಡೆಯಲಿದೆ. ಮತದಾನ ಹಿನ್ನೆಲೆ ಮತಗಟ್ಟೆ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಬೆಳ್ಳಂಬೆಳಗ್ಗೆಯೇ ಮತದಾರರು ಸರತಿ ಸಾಲಿನಲ್ಲಿ ಬಂದು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ.
ಉಪಚುನಾಚಣೆಯ 276 ಮತಗಟ್ಟೆಗಳಲ್ಲಿಯು ಶಾಂತಿಯುತ ಮತದಾನ ನಡೆಯುತ್ತಿದೆ. ಬೆಳಿಗ್ಗೆ 11 ಗಂಟೆ ಹೊತ್ತಿಗೆ ಶೇ 27.02ರಷ್ಟು ಮತದಾನವಾಗಿದೆ. ಒಟ್ಟು 2.32 ಲಕ್ಷ ಮತಗಳ ಪೈಕಿ ಇದುವರೆಗೆ 62,941 ಮತಗಳು ಚಲಾವಣೆಯಾಗಿವೆ. ಆ ಪೈಕಿ 31,160 ಪುರುಷರು ಮತ್ತು 31,781 ಮಹಿಳೆಯರು ತಮ್ಮ ಹಕ್ಕು ಚಲಾಯಿಸಿದ್ದಾರೆ.
ಸಂಡೂರು ವಿಧಾನಸಭಾ ಉಪ ಚುನಾವಣೆಯ ಶೇಕಡಾವಾರು ಮತದಾನ ಪ್ರಮಾಣ 11ಕ್ಕೆ ಗಂಟೆಯವರೆಗೆ 26% ಮತದಾನ ನಡೆದಿದೆ.
ಶಿಗ್ಗಾಂವ್ ಕ್ಷೇತ್ರದಲ್ಲಿ ಬೆಳಗಿನ 7 ಗಂಟೆಯಿಂದ 9 ಗಂಟೆವರೆಗೆ ಶೇ.10.08ರಷ್ಟು ಮತದಾನವಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






