ಮೊಬೈಲ್ ಕದ್ದ ಅಂತ ಬಾಲಕನನ್ನು ಉಲ್ಟಾ ನೇತು ಹಾಕಿ ಕರೆಂಟ್ ಶಾಕ್ ಕೊಟ್ಟ ದುರುಳರು!

ಕೋಲ್ಕತಾ:- ಹೃದಯವಿದ್ರಾವಕ ಘಟನೆಯೊಂದು ಪಶ್ಚಿಮ ಬಂಗಾಳದ ಮಹೇಶತಲಾದಲ್ಲಿ ನಡೆದಿದೆ. ದುರುಳರು, ಕಾರ್ಖಾನೆಯಲ್ಲಿ ಮಾಲೀಕರ ಮೊಬೈಲ್ ಕಳ್ಳತನದ ಅನುಮಾನದ ಮೇರೆಗೆ 14 ವರ್ಷದ ಬಾಲಕನನ್ನು ಉಲ್ಟಾ ನೇತು ಹಾಕಿ, ವಿದ್ಯುತ್ ಶಾಕ್ ಕೊಟ್ಟಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪೊಲೀಸರು ತಕ್ಷಣ ಕ್ರಮ ಕೈಗೊಂಡು ಪ್ರಮುಖ ಆರೋಪಿಯನ್ನು ಬಂಧಿಸಿದರು. ಘಟನೆಯ ಗಂಭೀರತೆಯನ್ನು ಪರಿಗಣಿಸಿ, ತನಿಖೆಯನ್ನು ತ್ವರಿತವಾಗಿ ನಡೆಸಲಾಗುತ್ತಿದ್ದು, ಬಾಲಕನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವ್ಯಕ್ತಿಯ ಕುಟುಂಬದವರು ಕಳ್ಳತನದ ಆರೋಪವನ್ನು ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ಆತ ಯಾವುದೇ ಮೊಬೈಲ್ ಕದ್ದಿಲ್ಲ, ಸುಳ್ಳು ಆರೋಪದಲ್ಲಿ ಸಿಲುಕಿಸಿ ಚಿತ್ರಹಿಂಸೆ ನೀಡಲಾಗಿದೆ ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ. ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯ ಕುಟುಂಬದವರು ದೂರು ದಾಖಲಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






