ಮೋದಿಯವರ ಆರ್ಥಿಕ ನೀತಿಯಿಂದಾಗಿ ಸಾಮಾನ್ಯ ಜನರ ಜೀವನ ನರಕವಾಗಿದೆ: ಪ್ರಿಯಾಂಕ್ ಖರ್ಗೆ ಕಿಡಿ

ಬೆಂಗಳೂರು: ಮೋದಿಯವರ ಆರ್ಥಿಕ ನೀತಿಯಿಂದಾಗಿ ಸಾಮಾನ್ಯ ಜನರ ಜೀವನ ನರಕವಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿಯವರ ಆರ್ಥಿಕ ನೀತಿಯಿಂದಾಗಿ ಸಾಮಾನ್ಯ ಜನರ ಜೀವನ ನರಕವಾಗಿದೆ.
ಈ ಎಲ್ಲ ಬೆಲೆ ಏರಿಕೆಗೆ ಯಾರು ಹೊಣೆ, ಪ್ರಧಾನಿ ಮೋದಿಯವರ ಮಾಸ್ಟರ್ ಸ್ಟ್ರೋಕ್ನಿಂದ ಆರ್ಥಿಕತೆ ಕುಸಿದಿದೆ. ಅದಾನಿ ಅಂಬಾನಿಯಿಂದಾಗಿಯೇ ಪರಿಸ್ಥಿತಿ ಹೀಗಿದೆ' ಎಂದು ಆರೋಪಿಸಿದ್ದಾರೆ.
ಬಜೆಟ್ ಬಗ್ಗೆ ಚರ್ಚೆ ಏಕೆ ನಡೆಯಲಿಲ್ಲ, ಸಿದ್ದರಾಮಯ್ಯ ಅವರು 4 ಲಕ್ಷ ಕೋಟಿ ರೂ. ಬಜೆಟ್ ಮಂಡಿಸಿದ್ದಾರೆ. ಅದನ್ನು ಎಳೆ ಎಳೆಯಾಗಿ ಬಿಚ್ಚಬಹುದಿತ್ತು. ಆದರೆ, ಇಂದು ವಿಜಯೇಂದ್ರ ಮತ್ತು ಯತ್ನಾಳ್ ನಡುವಿನ ಜಗಳವನ್ನು ಮುಚ್ಚಿಹಾಕಲು ಜನರ ದಾರಿ ತಪ್ಪಿಸುತ್ತಿದ್ದಾರೆ. ಅವರಲ್ಲಿ ಸಮನ್ವಯದ ಕೊರತೆ ಇದೆ' ಎಂದು ಹೇಳಿದರು.
ನಿಮ್ಮ ಪ್ರತಿಕ್ರಿಯೆ ಏನು?






