ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್ ಪ್ರೂವ್ ಆಗಿದೆ: ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

ಬೆಂಗಳೂರು: ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್ ಪ್ರೂವ್ ಆಗಿದೆ ಎಂದು ಬಿಜೆಪಿ ನಾಯಕರ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮೊದಲು ನಾನು ಕೇಳಿದ ಪ್ರಶ್ನೆಗೆ ಬಿಜೆಪಿ ಅವರು ಉತ್ತರ ಕೊಡಲಿ. ಯಡಿಯೂರಪ್ಪ ವಿರುದ್ಧ ಫೋಕ್ಸೊ ಕೇಸ್ ಪ್ರೂವ್ ಆಗಿದೆ. ಅದರ ಬಗ್ಗೆ ಮಾತಾಡಿ. ಮುನಿರತ್ನ ಕೇಸ್, ಸಿ.ಟಿ.ರವಿ ಕೇಸ್ ಬಗ್ಗೆ ಏನ್ ಹೇಳ್ತಾರೆ. ನನ್ನ ರಾಜೀನಾಮೆ ಕೇಳೋ ನೈತಿಕತೆ ಇದೆಯಾ ಅಂತ ಬಿಜೆಪಿ ನಾಯಕರ ವಿರುದ್ಧ ಪ್ರಿಯಾಂಕ್ ಕಿಡಿಕಾರಿದರು.
ಕೋವಿಡ್ ಹಗರಣದ ಬಗ್ಗೆ ಕುನ್ನಾ ವರದಿಯಲ್ಲಿ ಸ್ಪಷ್ಟವಾಗಿ ಉಲ್ಲೇಖವಾಗಿದೆ. ಯಡಿಯೂರಪ್ಪ, ಶ್ರೀರಾಮುಲು ಅಕ್ರಮ ಮಾಡಿರೋ ಬಗ್ಗೆ. ಅವರ ರಾಜೀನಾಮೆ ಪಡೆದ್ರಾ? ದಾಖಲೆ ಇಟ್ಟುಕೊಂಡು ಪುರಾವೆ ಇಟ್ಟುಕೊಂಡು ಮಾತಾಡಿ. ನಿಮ್ಮ ಹೈಕಮಾಂಡ್ ಲೀಡರ್ಗಳ ಮನವೊಲಿಕೆ ಮಾಡೋಕೆ ಆರೋಪ ಮಾಡಬೇಡಿ ಅಂತ ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟರು.
ನಿಮ್ಮ ಪ್ರತಿಕ್ರಿಯೆ ಏನು?






