ಯತ್ನಾಳ್ ಬಿಜೆಪಿ ವಿರುದ್ಧ ಏನೇ ಹೇಳಿದ್ದರೂ ಅದು ನೂರಕ್ಕೆ ನೂರು ಸತ್ಯವಿದೆ: ಈಶ್ವರ್ ಖಂಡ್ರೆ

ಬೀದರ್: ಯತ್ನಾಳ್ ಬಿಜೆಪಿ ವಿರುದ್ಧ ಏನೇ ಹೇಳಿದ್ದರೂ ಅದು ನೂರಕ್ಕೆ ನೂರು ಸತ್ಯವಿದೆ ಎಂದು ಯತ್ನಾಳ್ ಪರ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಬ್ಯಾಟ್ ಬೀಸಿದ್ದಾರೆ. ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರದ ದಾಹಕ್ಕಾಗಿ ಏನು ಮಾಡಲು ಹಿಂಜರಿಯದವರು ಬಿಜೆಪಿಯವರು. ಯಾವ ಮಟ್ಟಕ್ಕೂ ಇಳಿಯಲು ತಯಾರಾಗಿರುತ್ತಾರೆ.
ಈ ರಾಜ್ಯದ ಜನರಿಗೆ ಬಿಜೆಪಿ ನಾಯಕರು ಉತ್ತರ ನೀಡಲಿ. 15 ಜನ ಶಾಸಕರನ್ನು ಖರೀದಿ ಮಾಡಿದ್ದು ಎಲ್ಲರಿಗೂ ಗೊತ್ತಿದೆ. ಸಿಎಂ ಆಗಲು 2500 ಕೋಟಿ ರೂ. ಕೊಡಬೇಕು ಎಂದು ಸ್ವತಃ ಯತ್ನಾಳ್ ಹೇಳಿದ್ದರು. ಇನ್ನೂ ಸಚಿವರಾಗಲು 500 ಕೋಟಿ ಕೊಡಬೇಕು ಎಂದು ಹೇಳಿದ್ದರು. ಯತ್ನಾಳ್ ಬಿಜೆಪಿ ವಿರುದ್ಧ ಏನೇ ಹೇಳಿದ್ದರೂ ಅದು ನೂರಕ್ಕೆ ನೂರು ಸತ್ಯವಿದೆ. ಯತ್ನಾಳ್ಗೆ ಏನಾದರೂ ಇಲ್ಲಿಯವರೆಗೆ ನೋಟಿಸ್ ಬಂದಿದೆಯಾ? ಎಂದು ಯತ್ನಾಳ್ ಪರ ಬ್ಯಾಟ್ ಬೀಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






