ಯಾವುದನ್ನು ಫ್ರೀ ಕೊಡಬಾರದು, 'ಗ್ಯಾರಂಟಿ' ಅಪಾಯಕಾರಿ: ಕೈ ಮುಖಂಡನಿಂದಲೇ ಬಿಟ್ಟಿ ಭಾಗ್ಯಕ್ಕೆ ವಿರೋಧ!

ಉತ್ತರ ಕನ್ನಡ:- ಉಚಿತ ಯೋಜನೆಗಳು ಅಪಾಯಕಾರಿ, ಯಾವುದನ್ನೂ ಫ್ರೀ ಕೊಡಬಾರದು ಎಂದು ಕಾಂಗ್ರೆಸ್ ಶಾಸಕ ಆರ್ವಿ ದೇಶಪಾಂಡೆ ಅವರೇ ಹೇಳಿದ್ದಾರೆ. ಈ ಮೂಲಕ ತಮ್ಮ ಸರ್ಕಾರದ ಗ್ಯಾರಂಟಿ ಜಾರಿಗೆ ವಿರೋಧ ಮಾಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಉಚಿತ ಕೊಡುಗೆ ಎಂಬುದು ಅಪಾಯಕಾರಿ ಪದ. ಜನರಿಗೆ ಏನನ್ನೂ ಉಚಿತವಾಗಿ ನೀಡಬಾರದು ಮತ್ತು ಪ್ರತಿಯೊಂದು ಸೇವೆಗೂ ಶುಲ್ಕ ನಿಗದಿಪಡಿಸಬೇಕು ಎಂದು ಆರ್ವಿ ದೇಶಪಾಂಡೆ ಅಭಿಪ್ರಾಯಪಟ್ಟಿದ್ದಾರೆ. ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತ ಬಸ್ ಪ್ರಯಾಣವನ್ನು ಆನಂದಿಸುತ್ತಿದ್ದಾರೆ. ಈ ಯೋಜನೆಯನ್ನು ಪುರುಷರಿಗೂ ವಿಸ್ತರಿಸಬೇಕೆಂಬ ಬೇಡಿಕೆ ಇತ್ತು. ಎಲ್ಲವನ್ನೂ ಉಚಿತವಾಗಿ ನೀಡಿದರೆ ನಾವು ಸಾರಿಗೆ ಸಂಸ್ಥೆಗಳನ್ನು ನಡೆಸುವುದು ಹೇಗೆ ಎಂದು ಅವರು ಪ್ರಶ್ನಿಸಿದ್ದಾರೆ.
ಇನ್ನೂ ಕರ್ನಾಟಕ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಮಹಿಳೆಯರಿಗೆ ಸಾರಿಗೆ ಬಸ್ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ‘ಶಕ್ತಿ ಯೋಜನೆ’ ಜಾರಿಗೊಳಿಸಲಾಗಿದೆ. ಉಳಿದಂತೆ ಯುವನಿಧಿ, ಅನ್ನಭಾಗ್ಯ, ಗೃಹ ಲಕ್ಷ್ಮಿ, ಗೃಹ ಜ್ಯೋತಿ ಯೋಜನೆಗಳನ್ನೂ ಅನುಷ್ಠಾನಗೊಳಿಸಲಾಗಿದೆ. ಉಚಿತ ಯೋಜನೆಗಳ ಜಾರಿಯು ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗುತ್ತಿದೆ ಎಂದು ಅನೇಕ ಕಾಂಗ್ರೆಸ್ ನಾಯಕರೂ ಈಗಾಗಲೇ ಹೇಳಿದ್ದಾರೆ
ನಿಮ್ಮ ಪ್ರತಿಕ್ರಿಯೆ ಏನು?






