ಯಾವುದೇ ಕಾರಣಕ್ಕೂ ಭಾರತದಲ್ಲಿ ಭಯೋತ್ಪಾದನೆ ಬೆಳೆಯಲು ಬಿಡಲ್ಲ: ಸಚಿವ ರಾಜನಾಥ್ ಸಿಂಗ್

ನವದೆಹಲಿ: ಯಾವುದೇ ಕಾರಣಕ್ಕೂ ಭಾರತದಲ್ಲಿ ಭಯೋತ್ಪಾದನೆ ಬೆಳೆಯಲು ಬಿಡಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಖಡಕ್ ಸಂದೇಶ ರವಾನಿಸಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಆಪರೇಷನ್ ಸಿಂಧೂರ್ ಮೂಲಕ ಉಗ್ರರಿಗೆ ತಕ್ಕ ಪಾಠ ಕಲಿಸಲಾಗಿದೆ. ಉಗ್ರರಿಗೆ ಭಾರತ ಸುರಕ್ಷಿತ ಸ್ಥಳವಲ್ಲವೆಂದು ಸಂದೇಶ ನೀಡಲಾಗಿದೆ. ಯಾವುದೇ ಕಾರಣಕ್ಕೂ ಭಾರತದಲ್ಲಿ ಭಯೋತ್ಪಾದನೆ ಬೆಳೆಯಲು ಬಿಡಲ್ಲ. ಭಯೋತ್ಪಾದನೆ ವಿರುದ್ಧ ಭಾರತ ಶೂನ್ಯ ಸಹಿಷ್ಣುತೆ ನೀತಿಯನ್ನು ಹೊಂದಿದೆ ಎಂದರು.
ಉಗ್ರರ ವಿರುದ್ಧ ಆಪರೇಷನ್ ಸಿಂಧೂರ್ ನಡೆಸಲಾಗಿದ್ದು, ಆಪರೇಷನ್ ಸಿಂಧೂರ್ ಯಶಸ್ವಿಯಾಗಿ ನಡೆಸಿದ್ದಕ್ಕೆ ಸೇನೆಗೆ ಅಭಿನಂದನೆಗಳು. ಪಹಲ್ಗಾಮ್ನಲ್ಲಿ ಉಗ್ರರ ದಾಳಿಗೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ್ ಆಪರೇಷನ್ ಸಿಂಧೂರ್ ಮೂಲಕ ಉಗ್ರರಿಗೆ ತಕ್ಕ ಪಾಠ ಕಲಿಸಲಾಗಿದೆ ಎಂದರು.
ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ನೆಲೆಯನ್ನು ನಾಶಮಾಡುವ ಉದ್ದೇಶದಿಂದ ಭಾರತೀಯ ಪಡೆಗಳು ಆಪರೇಷನ್ ಸಿಂಧೂರ್ ಪ್ರಾರಂಭಿಸಿದವು. ನಾವು ಎಂದಿಗೂ ಪಾಕಿಸ್ತಾನದ ಸಾಮಾನ್ಯ ನಾಗರಿಕರನ್ನು ಗುರಿಯಾಗಿಸಿಕೊಂಡಿಲ್ಲ. ಆದರೆ, ಪಾಕಿಸ್ತಾನವು ಭಾರತೀಯ ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡಿದ್ದಲ್ಲದೆ, ದೇವಾಲಯಗಳು ಮತ್ತು ಗುರುದ್ವಾರಗಳ ಮೇಲೂ ದಾಳಿ ಮಾಡಲು ಪ್ರಯತ್ನಿಸಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಭಾರತೀಯ ಪಡೆಗಳು ಧೈರ್ಯ ಮತ್ತು ಸಂಯಮ ಪ್ರದರ್ಶಿಸಿದವು ಮತ್ತು ಪಾಕಿಸ್ತಾನದ ವಿವಿಧ ಸ್ಥಳಗಳಲ್ಲಿ ದಾಳಿ ಮಾಡಿ ಸೂಕ್ತ ಉತ್ತರ ನೀಡಿದವು ಎಂದು ಹೇಳಿದರು.
ನಿಮ್ಮ ಪ್ರತಿಕ್ರಿಯೆ ಏನು?






