ಯೋಗೇಶ್ವರ್ ಮೊದಲಿಂದಲೂ ಎಲ್ಲ ಪಕ್ಷಗಳ ಜೊತೆ ಲಿಂಕ್ ಇಟ್ಟಿಕೊಂಡಿದ್ದರು: ಆರ್ ಅಶೋಕ್

ಬೆಂಗಳೂರು: ಯೋಗೇಶ್ವರ್ ಮೊದಲಿಂದಲೂ ಎಲ್ಲ ಪಕ್ಷಗಳ ಜೊತೆ ಲಿಂಕ್ ಇಟ್ಟಿಕೊಂಡಿದ್ದರು ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿಪಿ ಯೋಗೇಶ್ವರ್ ಬಿಜೆಪಿಯ ಕಟ್ಟಾಳು ಅಲ್ಲ,
ಸಿಪಿ ಯೋಗೇಶ್ವರ್ ಮೊದಲಿಂದಲೂ ಎಲ್ಲ ಪಕ್ಷಗಳ ಜೊತೆ ಲಿಂಕ್ ಇಟ್ಟಿಕೊಂಡವರು. ಕಾಟಾಚಾರಕ್ಕೆ ನಮ್ಮೊಂದಿಗೆ ಇದ್ದರು ಅನ್ನಿಸುತ್ತೆ ಎಂದರು. ಇನ್ನೂ ಸಿಪಿ ಯೋಗೇಶ್ವರ್ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನ ಮಾಡಿದ್ವಿ. ನಮ್ಮ ನಂಬಿಕೆಗೆ ಅಪಚಾರ ಮಾಡಿ ಹೋಗಿ ಹೋಗಿದ್ದಾರೆ.
ಕಾಂಗ್ರೆಸ್ಗೆ ಪಕ್ಷ ಸೇರಿ ಸಿಪಿ ಯೋಗೇಶ್ವರ್ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ. ಅವರು ಕಾಂಗ್ರೆಸ್ ಸೇರಿದ್ದು, ನಮ್ಮ ಪಕ್ಷದ ಮೇಲೆ ಯಾವುದೇ ರೀತಿಯ ಪರಿಣಾಮ ಆಗುವುದಿಲ್ಲ. ಪಕ್ಷ ತೊರೆದು ಬಹಳಷ್ಟು ಜನ ಹೋಗಿದ್ದಾರೆ. ಲಕ್ಷಣ್ ಸವದಿ ಕಾಂಗ್ರೆಸ್ ಸೇರಿದ್ದಾರೆ. ಅವರನ್ನು ಮಂತ್ರಿ ಮಾಡಿದ್ದಾರಾ? ಜಗದೀಶ್ ಶೆಟ್ಟರ್ ಅವರು ಹೋಗದಿದ್ದರು, ಯಾವ ಸ್ಥಾನ ಕೊಟ್ಟಿದ್ದರು? ಎಂದು ಪ್ರಶ್ನಿಸಿದರು.
ನಿಮ್ಮ ಪ್ರತಿಕ್ರಿಯೆ ಏನು?






