ರಣಜಿ ಟೂರ್ನಿಯತ್ತ ಮುಖಮಾಡಿದ ಸಿರಾಜ್: ಹೈದರಾಬಾದ್ ಪರ ಕಣಕ್ಕಿಳಿಯಲು ಸಜ್ಜಾದ RCB ಮಾಜಿ ಆಟಗಾರ!

ಕಳೆದ ಕೆಲ ವರ್ಷಗಳಿಂದ ಟೀಮ್ ಇಂಡಿಯಾದ ಖಾಯಂ ಸದಸ್ಯರಾಗಿದ್ದ ಸಿರಾಜ್ ಅವರನ್ನು ಚಾಂಪಿಯನ್ಸ್ ಟ್ರೋಫಿಯಿಂದ ಕೈ ಬಿಡಲಾಗಿದೆ. ಇತ್ತ ಭಾರತ ತಂಡದಿಂದ ಹೊರಬಿದ್ದಿರುವ ಸಿರಾಜ್, ರಣಜಿ ಟೂರ್ನಿಯತ್ತ ಮುಖ ಮಾಡಲು ನಿರ್ಧರಿಸಿದ್ದಾರೆ.
ವರದಿ ಪ್ರಕಾರ, ಟೀಮ್ ಇಂಡಿಯಾ ವೇಗಿ ರಣಜಿ ಟೂರ್ನಿಯ ದ್ವಿತೀಯಾರ್ಧದ ಪಂದ್ಯದಲ್ಲಿ ಹೈದರಾಬಾದ್ ಪರ ಕಣಕ್ಕಿಳಿಯಲಿದ್ದಾರೆ.
ಜನವರಿ 23 ರಿಂದ ಶುರುವಾಗಲಿರುವ ರಣಜಿ ಟೂರ್ನಿಯ ದ್ವಿತೀಯ ಹಂತದ ಮೊದಲ ಪಂದ್ಯಕ್ಕೆ ಸಿರಾಜ್ ಲಭ್ಯರಿಲ್ಲ ಎಂದು ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಜಗನ್ ಮೋಹನ್ ರಾವ್ ಐಎಎನ್ಎಸ್ಗೆ ತಿಳಿಸಿದ್ದಾರೆ. ಇದಾಗ್ಯೂ ಅವರು ಮುಂದಿನ ಪಂದ್ಯದ ವೇಳೆ ತಂಡವನ್ನು ಕೂಡಿಕೊಳ್ಳುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ.
ಅದರಂತೆ ಜನವರಿ 30 ರಿಂದ ನಾಗ್ಪುರದಲ್ಲಿ ಪ್ರಾರಂಭವಾಗುವ ವಿದರ್ಭ ವಿರುದ್ಧದ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಹೈದರಾಬಾದ್ ಪರ ಕಣಕ್ಕಿಳಿಯಲಿದ್ದಾರೆ ಎಂದು ತಿಳಿದು ಬಂದಿದೆ.
ನಿಮ್ಮ ಪ್ರತಿಕ್ರಿಯೆ ಏನು?






