ರಾಜಸ್ಥಾನದಲ್ಲಿ ಡೆವಿಲ್ ಚಿತ್ರೀಕರಣ ಮುಕ್ತಾಯ: ಮುಂದಿನ ಶೂಟಿಂಗ್ ಹೈದರಾಬಾದ್!

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ತನ್ನ ಸಿನಿಮಾದತ್ತ ಗಮನ ಹರಿಸಿದ್ದಾರೆ.
ಇನ್ನೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಡೆವಿಲ್ ಚಿತ್ರೀಕರಣ ರಾಜಸ್ಥಾನದಲ್ಲಿ ಮುಕ್ತಾಯವಾಗಿದೆ. ಒಂದು ವಾರಗಳ ಕಾಲ ರಾಜಸ್ಥಾನದಲ್ಲಿ ಯಶಸ್ವಿಯಾಗಿ ಚಿತ್ರೀಕರಣ ಮಾಡಿ ಮುಗಿಸಿದ್ದಾರೆ ದರ್ಶನ್ & ಟೀಮ್ ಎನ್ನಲಾಗಿದೆ. ಹಾಗಾಗಿ ಏ.2ರಂದು ಬೆಂಗಳೂರಿಗೆ ‘ಡೆವಿಲ್’ ಟೀಮ್ ವಾಪಸ್ಸಾಗಲಿದೆ.
ಮುಂದಿನ ಹಂತದ ಚಿತ್ರೀಕರಣವು ಹೈದರಾಬಾದ್ನಲ್ಲಿ ನಡೆಯಲಿದೆ. ಸದ್ಯದಲ್ಲೇ ‘ಡೆವಿಲ್’ ಟೀಮ್ ತೆರಳಲಿದೆ. ಅಂದಹಾಗೆ, ಈ ವರ್ಷದ ಅಂತ್ಯದಲ್ಲಿ ಡೆವಿಲ್ ಸಿನಿಮಾ ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದೆ.
ಇತ್ತೀಚೆಗೆ ಮೈಸೂರಿನಲ್ಲಿ ‘ಡೆವಿಲ್’ ಸಿನಿಮಾದ ಚಿತ್ರೀಕರಣ ಮಾಡಲಾಗಿತ್ತು. ಈ ಬೆನ್ನಲ್ಲೇ ರಾಜಸ್ಥಾನಕ್ಕೆ ‘ಡೆವಿಲ್’ ಟೀಮ್ ತೆರಳಿತ್ತು.
ನಿಮ್ಮ ಪ್ರತಿಕ್ರಿಯೆ ಏನು?






