ರಾಜ್ಯ ಕಾಂಗ್ರೆಸ್ ಸರ್ಕಾರ 18 ಲಕ್ಷ ಕೋಟಿ ಸಾಲ ಮಾಡಿದ್ದಾರೆ: ಹೆಚ್ ಡಿ ಕುಮಾರಸ್ವಾಮಿ

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರ 18 ಲಕ್ಷ ಕೋಟಿ ಸಾಲ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಆರೋಪಿಸದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಾರಿಗೆ ಬಸ್ ಟಿಕೆಟ್ ದರ ಶೇಕಡಾ 15ರಷ್ಟು ಹೆಚ್ಚಳ ವಿಚಾರವಾಗಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ 18 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಸರ್ಕಾರದ ಬಂಡವಾಳ ಮುಂದಿನ ಬಜೆಟ್ನಲ್ಲಿ ಗೊತ್ತಾಗುತ್ತದೆ.
ರಾಜ್ಯದ ಜನ ಗಟ್ಟಿ ಇದ್ದೀರಲ್ಲ, ಸರ್ಕಾರದ ಸಾಲ ತೀರಿಸುತ್ತೀರಾ? ಬಸ್ ಟಿಕೆಟ್ ದರ 15% ಅಲ್ಲ, ಇನ್ನೂ 5% ಜಾಸ್ತಿ ಮಾಡಿ ಅಂತಾರೆ. ರಾಜ್ಯ ಸರ್ಕಾರ ಜಾಗ ಕೊಡದಿದ್ದರೆ ಕೈಗಾರಿಕೆ ತರಲು ಸಾಧ್ಯವಾಗಲ್ಲ. ರಾಜ್ಯಕ್ಕೆ ಕೈಗಾರಿಕೆ ತರಬೇಕಾದರೆ ಸರ್ಕಾರ ಕೈಜೋಡಿಸಬೇಕು. ಆದರೂ ಯಾವುದೇ ಕಾರಣಕ್ಕೂ ರಾಜ್ಯವನ್ನು ನಾವು ಕಡೆಗಣಿಸಿಲ್ಲ ಎಂದು ಹೇಳಿದ್ದಾರೆ. ಕೇಸ್ ದಾಖಲಿಸುವ ಬಗ್ಗೆ ಕಾರ್ಯಕರ್ತರು ಭಯಪಡಬೇಡಿ.
ಕೇಂದ್ರ ಸಚಿವನಾಗಿರುವ ನನ್ನ ಮೇಲೆಯೇ ಕೇಸ್ ಹಾಕಿದ್ದಾರೆ. ಗವರ್ನರ್ ಕಚೇರಿಯಲ್ಲಿ ತನಿಖೆ ಮಾಡಲು ಅನುಮತಿ ಕೇಳ್ತಾನೆ. ನನ್ನ ಮೇಲೆ ಹಲವು ಕೇಸ್ ಹಾಕಿದ್ದಾರೆ. 2009ರಲ್ಲಿ ನನ್ನ ಮೇಲೆ ರಾಜಕೀಯವಾಗಿ ಕೇಸ್ ಹಾಕಿದ್ದಾರೆ. ಅದನ್ನು ಇನ್ನೂ ಹಾಗೆಯೇ ಇಟ್ಟುಕೊಂಡಿದ್ದಾರೆ. ಎಷ್ಟು ವರ್ಷ ತನಿಖೆ ಮಾಡ್ತೀರಾ? ಇದಕ್ಕೆ ಹೆದರುವ ಪ್ರಶ್ನೆ ಇಲ್ಲ. ಕಾಲ ಬರುತ್ತದೆ, ಎಲ್ಲಾ ಬದಲಾಗುತ್ತೆ, ಯಾರೂ ಹೆದರಬೇಡಿ ಎಂದು ವಾಗ್ದಾಳಿ ಮಾಡಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






