ರಾಜ್ಯಕ್ಕೆ ಯಾವುದೇ ವಿಶೇಷ ಅನುದಾನ ತರುವಲ್ಲಿ ಕುಮಾರಸ್ವಾಮಿ ವಿಫಲರಾಗಿದ್ದಾರೆ: ಹೆಚ್ಸಿ ಬಾಲಕೃಷ್ಣ

ರಾಮನಗರ: ರಾಜ್ಯಕ್ಕೆ ಯಾವುದೇ ವಿಶೇಷ ಅನುದಾನ ತರುವಲ್ಲಿ ಕುಮಾರಸ್ವಾಮಿ ವಿಫಲರಾಗಿದ್ದಾರೆ ಎಂದು ಮಾಗಡಿ ಶಾಸಕ ಹೆಚ್ಸಿ ಬಾಲಕೃಷ್ಣ ಹೇಳಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ಮಂಡ್ಯ ಭಾಗದಲ್ಲಿ ರಸ್ತೆ ಮಾಡಿಸುತ್ತಿದ್ದಾರೆ ಅಷ್ಟೇ ಬಿಟ್ಟರೆ ರಾಜ್ಯಕ್ಕೆ ಯಾವುದೇ ವಿಶೇಷ ಅನುದಾನ ತರುವಲ್ಲಿ ವಿಫಲರಾಗಿದ್ದಾರೆ.
ಮೇಕೆದಾಟು ಯೋಜನೆ, ರೈತರಿಗೆ ವಿಶೇಷ ಅನುದಾನ, ನೀರಾವರಿ ಯೋಜನೆಯನ್ನ ಮಾಡಿಲ್ಲ. ಮೀಸಲಿಟ್ಟ ಭದ್ರಾ ಮೇಲ್ದಂಡೆ ಯೋಜನೆಯ 5,000 ಕೋಟಿ ಅನುದಾನ ಬಿಡುಗಡೆ ಮಾಡಿಸಿಲ್ಲ. ಕುಮಾರಸ್ವಾಮಿ ಎಲ್ಲರ ರೀತಿ ಮಂತ್ರಿಯಾಗಬಾರದು. ವಿಭಿನ್ನ ಕಾರ್ಯ ಚಟುವಟಿಕೆಗಳನ್ನ ತೋರಿಸಿ ರಾಜ್ಯಕ್ಕೆ ಅನುಕೂಲ ಮಾಡಬೇಕು ಎಂದು ಟಾಂಗ್ ನೀಡಿದ್ದಾರೆ.
ನಾವು ಗ್ಯಾರಂಟಿ ಯೋಜನೆಗೆ ಅನುದಾನ ಕೊಟ್ಟಿದ್ದೇವೆ. ಕೇಂದ್ರ ಸಚಿವ ಕುಮಾರಸ್ವಾಮಿ ಕೃಷಿಗೆ ಅನುದಾನ ನೀಡಲಿ. ಅವರೇ ಅದರ ಕ್ರೆಡಿಟ್ ಕೂಡಾ ತೆಗೆದುಕೊಳ್ಳಲಿ. ಕೃಷಿಗೆ ವಿಶೇಷ ಅನುದಾನ ತರುವಂತೆ ಮನವಿ ಮಾಡುತ್ತೇನೆ ಎಂದರು.
ನಿಮ್ಮ ಪ್ರತಿಕ್ರಿಯೆ ಏನು?






