ರಾಜ್ಯದ ಜನರು ಸಾಧ್ಯವಾದಷ್ಟು ಬೇಗ ಮಕ್ಕಳನ್ನು ಹೆರುವಂತೆ ಸಿಎಂ ಎಂ.ಕೆ. ಸ್ಟಾಲಿನ್ ಮನವಿ..!

ತಮಿಳುನಾಡು: ಕೇಂದ್ರ ಸರ್ಕಾರದ ಗಡಿ ವಿಂಗಡಣೆ ಯೋಜನೆಗಳ ಹಿನ್ನೆಲೆಯಲ್ಲಿ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ತಮ್ಮ ರಾಜ್ಯದ ಜನರಿಗೆ ತಕ್ಷಣ ಮಕ್ಕಳನ್ನು ಹೆರುವಂತೆ ಮನವಿ ಮಾಡಿದರು ಮತ್ತು ನಾಗರಿಕರ ಯಶಸ್ವಿ ಕುಟುಂಬ ಯೋಜನೆ ಕ್ರಮಗಳು ಈಗ ರಾಜ್ಯಕ್ಕೆ ಅನನುಕೂಲಕರವಾಗಬಹುದು ಎಂದು ಒತ್ತಿ ಹೇಳಿದರು.
ಈ ಹಿಂದೆ ನಾವು ಕಡಿಮೆ ಮಕ್ಕಳನ್ನು ಹೆರಬೇಕೆಂದು ಹೇಳುತ್ತಿದ್ದೆವು. ಆದರೆ ಈಗ ಪರಿಸ್ಥಿತಿ ಬದಲಾಗಿದೆ ಈಗ ತಕ್ಷಣ ಮಕ್ಕಳನ್ನು ಹೆರಬೇಕೆಂದು ಹೇಳುವಂತಾಗಿದೆ. ಕೇಂದ್ರ ಸರ್ಕಾರ ಜನಸಂಖ್ಯೆಯ ಆಧಾರದ ಮೇಲೆ ಕ್ಷೇತ್ರ ಪುನರ್ವಿಂಗಡಣೆ ಮಾಡಿದರೆ, ತಮಿಳುನಾಡಿನಲ್ಲಿ ಲೋಕಸಭಾ ಸ್ಥಾನಗಳ ಸಂಖ್ಯೆ ಮತ್ತು ಸಂಸತ್ತಿನಲ್ಲಿ ರಾಜ್ಯದ ಪ್ರಾತಿನಿಧ್ಯ ಕಡಿಮೆಯಾಗಬಹುದು ಎಂದು ಹೇಳಿದರು.
ಕ್ಷೇತ್ರ ಪುನರ್ವಿಂಗಡಣೆ ವಿಷಯದ ಕುರಿತು ಮಾರ್ಚ್ 5 ರಂದು ಸರ್ವಪಕ್ಷಗಳ ಸಭೆ ಕರೆದಿದ್ದು, ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ಮರೆತು ಸಭೆಯಲ್ಲಿ ಭಾಗವಹಿಸುವಂತೆ ಸಿಎಂ ಮನವಿ ಮಾಡಿದರು ಮತ್ತು ಕ್ಷೇತ್ರ ಪುನರ್ವಿಂಗಡಣೆ ವಿಷಯವು ತಮಿಳುನಾಡಿಗೆ ಬಹಳ ಮುಖ್ಯವಾಗಿದೆ ಎಂದರು.
ನಿಮ್ಮ ಪ್ರತಿಕ್ರಿಯೆ ಏನು?






