ರಾಜ್ಯದಲ್ಲಿ ಬಾಣಂತಿಯರಿಗೆ ಬದುಕುವ ಗ್ಯಾರಂಟಿಯನ್ನು ಸರ್ಕಾರ ಕೊಡಲಿ: ಆರ್ ಅಶೋಕ್

ಜನವರಿ 2, 2025 - 14:02
 0  10
ರಾಜ್ಯದಲ್ಲಿ ಬಾಣಂತಿಯರಿಗೆ ಬದುಕುವ ಗ್ಯಾರಂಟಿಯನ್ನು ಸರ್ಕಾರ ಕೊಡಲಿ: ಆರ್ ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಬಾಣಂತಿ ಹಾಗೂ ಗರ್ಭಿಣಿ ಮಹಿಳೆಯರ ಸಾವು ಮುಂದುವರೆದಿದೆ. ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಾಗಿತ್ತು. ಅದಾದ ಬಳಿಕ ಬೆಂಗಳೂರು ತುಮಕೂರಿನಲ್ಲೂ ಬಾಣಂತಿಯರ ಸಾವಾಗಿತ್ತು. ಇನ್ನು ನಿನ್ನೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲೂ ಗರ್ಭಿಣಿ ಮಹಿಳೆಯೊಬ್ಬರ ಸಾವಾಗಿತ್ತು. ಇನ್ನೂ ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವನ್ನು ಪ್ರತಿಪಕ್ಷ ನಾಯಕ ಆರ್ ಅಶೋಕ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 

ಬಾಣಂತಿಯರ ಸಾವಿಗೆ ಸಂಬಂಧಿಸಿದ ನ್ಯಾಯಾಂಗ ತನಿಖೆ ಬಗ್ಗೆ, ಡೆತ್ ಆಡಿಟ್ ಬಗ್ಗೆ ಇನ್ನೂ ಯಾವುದೇ ಮಾಹಿತಿ ಬಂದಿಲ್ಲ. ಕಳಪೆ ದ್ರಾವಣ ಪೂರೈಸಿದ ಕಂಪನಿ ವಿರುದ್ಧ ದೆಹಲಿಗೆ ಹೋಗಿ ದೂರು ಕೊಡುವುದಾಗಿ ಆರೋಗ್ಯ ಸಚಿವರು ಹೇಳಿದ್ದರು. ಆದರೆ ಇನ್ನೂ ಯಾಕೆ ಹೋಗಿ ದೂರು ಕೊಟ್ಟಿಲ್ಲ ಎಂದು ಅಶೋಕ್ ಪ್ರಶ್ನಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಗಳು ಬಾಣಂತಿಯರ ಪಾಲಿಗೆ ಮರಣ ಮೃದಂಗ ಬಾರಿಸುವಂತಾಗಿದೆ. ಅಪ್ಪಾ ಸಿದ್ದರಾಮಯ್ಯನವರೇ, ನಿಮ್ಮ 2000 ರೂಪಾಯಿ ನೀಡುವ ಬದಲು ಮೊದಲು ಬಾಣಂತಿಯರ ಸಾವು ನಿಲ್ಲಿಸಿ. ಔಷಧ ನಿಯಂತ್ರಣದಲ್ಲಿ ಗೋಲ್ಮಾಲ್ ಆಗುತ್ತಿರುವುದನ್ನು ತಪ್ಪಿಸಿ. ರಾಜ್ಯದಲ್ಲಿ ಬಾಣಂತಿಯರಿಗೆ ಬದುಕುವ ಗ್ಯಾರಂಟಿಯನ್ನು ಸರ್ಕಾರ ಕೊಡಲಿ ಎಂದು ಅವರು ಆಗ್ರಹಿಸಿದ್ದಾರೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow